LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ: ಡಾ.ಜಿ.ಪರಮೇಶ್ವರ್

Advertisement
ತುಮಕೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ ಇದೆ. ನಗರದ ಬೆಳವಣಿಗೆಯನ್ನು ಮನಗಂಡ ಸರ್ಕಾರವು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದೆ. ಅದೇ ಮಾದರಿಯಲ್ಲೇ ತುಮಕೂರನ್ನು ಬೆಂಗಳೂರು ಉತ್ತರ ಎಂದು ಹೆಸರಿಡಲು ಚಿಂತನ ನಡೆಸಲಾಗಿದೆ ಎಂದು ಗೃಹಸಚಿವ
ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ಮಹಿಳೆಯರ ವರ್ಗಗಳ ಸ್ನಾತಕೋತ್ತರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತುಮಕೂರು ನಗರದ ಸುತ್ತಲಿನ 14 ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ನಗರವನ್ನು ವಿಸ್ತರಿಸುವ ಪುಸ್ತಾವನೆ ಸಿದ್ಧವಿದ್ದು, ಹಂತ ಹಂತವಾಗಿ ವಿಸ್ತರಣಾ ಪಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸವಿರುವ ವಿವಾಸಿಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮರ್ಪಕ ಕುಡಿಯುವ ನೀರು, ರಸ್ತೆ, ಒಳಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಗಳನ್ನುಎದುರಿಸುತ್ತಿದ್ದಾರೆ. ನಗರ ವಿಸ್ತರಣೀಕರಣದಿಂದ ನಾಗರಿಕರಿಗೆ
ಮೂಲಭೂತ ಸೌಕರ್ಯಗಳು ತಲುವುತ್ತವೆ ಎಂದು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ