LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಾಹಿತಿ ವೀರಣ್ಣಗೌಡರಿಗೆ ಡಾ.ಹೆಚ್.ಎನ್.ನರಸಿಂಹಯ್ಯ ರಾಜ್ಯ ಪ್ರಶಸ್ತಿ ಪ್ರಧಾನ

Advertisement
ತುರುವೇಕೆರೆ : ತಾಲ್ಲೂಕಿನ ಸಾಹಿತಿ ಹಡವನಹಳ್ಳಿ ವೀರಣ್ಣಗೌಡರು ಬರೆದಿರುವ ’ಉರಿವ ದೀಪದ ಕೆಳಗೆ’ ಕೃತಿಗೆ ವಿಚಾರವಾದಿ ಡಾ.ಹೆಚ್.ಎನ್.ನರಸಿಂಹಯ್ಯ ಹೆಸರಿನ ರಾಜ್ಯ ಮಟ್ಟದ ಪುಸ್ತಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಭಾನುವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಜನಮನ ಸೇವಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಎಲೆರಾಂಪುರ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ಹನುಮಂತನಾಥ ಸ್ವಾಮೀಜಿ, ವಚನ ಜ್ಯೋತಿ ಬಳಗದ ಅಧ್ಯಕ್ಷರಾದ ಎಸ್.ಪಿನಾಕಪಾಣಿ, ಟ್ರಸ್ಟ್ನ ಅಧ್ಯಕ್ಷರಾದ ಡಿ.ಟಿ.ಗೋವಿಂದರಾಜು, ಲೇಖಕ ಮಂಜುನಾಥ್ ದಂಡಿನಶಿವರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವೀರಣ್ಣಗೌಡರಿಗೆ ಶುಭ ಕೋರಿದರು.

"ಉರಿವ ದೀಪದ ಕೆಳಗೆ" ಕಥಾ ಸಂಕಲನವು ವೀರಣ್ಣಗೌಡರ ಹತ್ತನೇ ಕೃತಿಯಾಗಿದ್ದು, ಈ ವರ್ಷ ತುಮಕೂರಿನಲ್ಲಿ ಬಿಡುಗಡೆಯಾಗಿತ್ತು. ಈ ಕೃತಿಯಲ್ಲಿ ಹತ್ತು ವಿಭಿನ್ನವಾದ ಕಥೆಗಳನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಗ್ರಾಮೀಣ ಸೊಗಡಿನ ಭಾಷೆಯಲ್ಲಿ ಮೂಡಿ ಬಂದಿರುವ ಈ ಕಥೆಗಳನ್ನು ಪ್ರಸಿದ್ದ ಲೇಖಕರುಗಳೂ ಸಹ ಓದಿ ಮೆಚ್ಚಿದ್ದನ್ನು ಇಲ್ಲಿ ಸ್ಮರಿಸಬಹುದು.

ವರದಿ : ಗಿರೀಶ್ ಕೆ ಭಟ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ