Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ಒಳತಿಗಾಗಿ ದುಡಿದ ಹಾನಗಲ್ಲ ಶಿವಯೋಗಿ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

Advertisement
ಕಲಬುರಗಿ: ಹಾನಗಲ್ಲ ಶಿವಯೋಗಿಗಳು ಕನ್ನಡ ನಾಡು ನುಡಿ, ಕಂಡ ಶ್ರೇಷ್ಠ ಮಠಾಧಿಪತಿಗಳು. ಅಖಿಲ ಭಾರತ ವೀರಶೈವ ಮಹಾಸಭೆ, ಶಿವಯೋಗ ಮಂದಿರ ಇವುಗಳನ್ನು ಸ್ಥಾಪಿಸುವುದರ ಜೊತೆಗೆ ನಾಡಿನ ಎಲ್ಲ ಮೂಲೆಗಳಲ್ಲಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಜ್ವಲಂತ ಸಾಕ್ಷಿಯಾಗಿದ್ದಾರೆ ಎಂದು ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಹೇಳಿದರು.

ಸೇಡಂ ರಸ್ತೆ ವಿದ್ಯಾನಗರ ವೆಲ್‌ಫೇರ್ ಸೊಸೈಟಿಯ ಆಶ್ರಯದಲ್ಲಿ ಹಮ್ಮಿಕೊಂಡ ಹಾನಗಲ್ಲ ಗುರುಕುಮಾರ ಶಿವಯೋಗಿಗಳ ಪುರಾಣ ಕಾರ್ಯಕ್ರಮವನ್ನು ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಉದ್ಘಾಟಿಸಿ ಮಾತನಾಡಿದರು.

ಸಮಾಜದ ಒಳತಿಗಾಗಿ ಹಗಲಿರುಳು ದುಡಿದ ಕಾವಿ ಕುಲದ ಸಂತ, ಗಾನಗಲ್ಲ ಕುಮಾರ ಶಿವಯೋಗಿಗಳು ಶಿವಯೋಗ ಮಂದಿರ ಕಟ್ಟುವುದರ ಮೂಲಕ ಸ್ವಾಮಿಗಳನ್ನು ತಯಾರಿಸಿದರು. ಸಮಾಜ ಯಾವತ್ತು ಅಂಧಕಾರದಿಂದ ಶಿಕ್ಷಣದಿಂದ ಸಂಸ್ಕಾರದಿಂದ ಅನಾಥ ಆಗಬಾರದೆಂದು ಸಮಾಜಕ್ಕೆ ಹಗಲಿರುಳು ದುಡಿದವರು ಹಾನಗಲ್ಲ ಶ್ರೀಗಳು ಎಂದರು.

ದಿವ್ಯ ಸಾನಿಧ್ಯ ವಹಿಸಿದ ಗದ್ದುಗೆ ಮಠದ ಚರಲಿಂಗ ಮಹಾಸ್ವಾಮಿ ಮಾತನಾಡಿದರು. ನಗರ ಪೋಲಿಸ್ ಆಯುಕ್ತ ಶರಣಪ್ಪ ಎಸ್.ಡಿ. ಅತಿಥಿಗಳಾಗಿ ಆಗಮಿಸಿದರು.

ಪ್ರಾರಂಭದಲ್ಲಿ ಮಧು ಹಿಂದೊಡ್ಡಿ, ರೇಖಾ ಅಂಡಗಿ, ತಾರಾ ಪಾಟೀಲ, ಶ್ರೀದೇವಿ ತಂಬಾಕೆ, ಹಾನಗಲ್ಲ ಶ್ರೀಗಳ ಕುರಿತು ಪ್ರಾರ್ಥನಾ ಗೀತೆ ಹಾಡಿದರು. ಡಾ.ಗುರುರಾಜ ಮುಗಳಿ ವಂದನಾರ್ಪಣೆ ಮಾಡಿದರು.

ವಿದ್ಯಾನಗರದ ವೆಲ್‌ಫೇರ್ ಸೊಸೈಟಿಯ ಅಧ್ಯಕ್ಷ ಮಲ್ಲಿನಾಥ ದೇಶಮುಖ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಉಮೇಶ ಶೆಟ್ಟಿ, ಕಾರ್ಯದರ್ಶಿ ಶಿವರಾಜ ಅಂಡಗಿ, ಖಜಾಂಚಿ ಗುರುಲಿಂಗಯ್ಯ ಮಠಪತಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುರಾಣ ಕಾರ್ಯಕ್ರಮದ ಸಮಿತಿಯ ಸುಭಾಷ ಮಂಠಾಳೆ, ಗುರುಲಿಂಗಯ್ಯ ಮಠಪತಿ, ಉದಯಕುಮಾರ ಪಡಶೆಟ್ಟಿ, ನಾಗರಾಜ ಹೆಬ್ಬಾಳ, ಶಾಂತಯ್ಯ ಬೀದಿಮನಿ ಹಾಗೂ ವೆಲ್‌ಫೇರ್ ಸೊಸೈಟಿಯ ಅಕ್ಕಮಹಾದೇವಿ ಮಹಿಳಾ ಟ್ರಸ್ಟಿನ ಹಾಗೂ ಮಲ್ಲಿಕಾರ್ಜುನ ತರುಣ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ