Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರು ಕಡಿಮೆ ಕುಡಿಯುತ್ತೀರಾ?ಕಿಡ್ನಿ ಹಾಳಾಗಬಹುದು ಎಚ್ಚರ

Advertisement
ಕೆಲಸದ ಮೇಲೆ ಹೆಚ್ಚು ಮಗ್ನರಾಗಿರುವವರು ಊಟ, ನೀರು ಎಲ್ಲವನ್ನೂ ಮರೆತು ಬಿಡುತ್ತಾರೆ. ಹೀಗಾಗಿ ನೀರು ಕುಡಿಯುವುದನ್ನು ನಿರ್ಲಕ್ಷಿಸುವವರೇ ಹೆಚ್ಚು. ಇದು ಕ್ರಮೇಣ ದೇಹದ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಇದು ವ್ಯಕ್ತಿಯ ಆರೋಗ್ಯದ ಮೇಲೆ ಅದರಲ್ಲಿಯೂ ಕಿಡ್ನಿಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದರೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ? ನಿರ್ಜಲೀಕರಣವನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ತಜ್ಞರಿಂದ ತಿಳಿದುಕೊಳ್ಳಿ.

ಬೇಸಿಗೆಯಲ್ಲಿ ದೇಹ ನಿರ್ಜಲೀಕರಣ(Dehydration) ವಾಗುವುದು ಸಾಮಾನ್ಯ. ಅದರಲ್ಲಿಯೂ ಪ್ರತಿದಿನ ಕೆಲಸಕ್ಕೆಂದು ಹೊರಗೆ ಹೋಗುವವರು ತಮಗೆ ನೀರು ಕುಡಿಯಲು ಕೂಡ ಸಮಯ ಸಿಗುವುದಿಲ್ಲ ಎಂದು ಹೇಳುವುದನ್ನು ನೀವು ಕೇಳಿರಬಹುದು. ಈ ರೀತಿಯ ಕಾರ್ಯನಿರತ ವೇಳಾಪಟ್ಟಿ ಮತ್ತು ಹವಾನಿಯಂತ್ರಣ ಸೇರಿದಂತೆ ಕೆಲಸದಲ್ಲಿನ ಅನೇಕ ವಿಷಯಗಳು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಅದರಲ್ಲಿಯೂ ಕೆಲಸದ ಮೇಲೆ ಹೆಚ್ಚು ಮಗ್ನರಾಗಿರುವವರು ಊಟ, ನೀರು ಎಲ್ಲವನ್ನೂ ಮರೆತು ಬಿಡುತ್ತಾರೆ. ಹೀಗಾಗಿ ನೀರು ಕುಡಿಯುವುದನ್ನು ನಿರ್ಲಕ್ಷಿಸುವವರೇ ಹೆಚ್ಚು. ಇದು ಕ್ರಮೇಣ ದೇಹದ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಇದು ವ್ಯಕ್ತಿಯ ಆರೋಗ್ಯದ ಮೇಲೆ ಅದರಲ್ಲಿಯೂ ಕಿಡ್ನಿಯ(kidneys) ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾದರೆ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗಿದೆ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ? ನಿರ್ಜಲೀಕರಣವನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ತಜ್ಞರಿಂದ ತಿಳಿದುಕೊಳ್ಳಿ.

ಡಾ. ಶಿವಾನಿ ಗುಪ್ತಾ ಅವರು ಹೇಳುವ ಪ್ರಕಾರ, “ಬೇಸಿಗೆಯಲ್ಲಿ ಸಾಮಾನ್ಯ ಸಮಸ್ಯೆಯಾಗಿರುವ ನಿರ್ಜಲೀಕರಣವು ಮೂತ್ರಪಿಂಡದ ಆರೋಗ್ಯಕ್ಕೆ ಗಮನಾರ್ಹ ಅಪಾಯವನ್ನುಂಟು ಮಾಡುತ್ತದೆ. ಜೊತೆಗೆ ಮಲಬದ್ಧತೆ, ತಲೆನೋವು, ಏಕಾಗ್ರತೆಯ ಕೊರತೆ, ಆಲಸ್ಯ, ಆಯಾಸ, ಹೆಚ್ಚಿದ ಚರ್ಮದ ಸುಕ್ಕುಗಳು ಮತ್ತು ವಯಸ್ಸಾದ ಪರಿಣಾಮಗಳಂತಹ ದೈಹಿಕ ರೋಗಲಕ್ಷಣ ಗಳಿಗೆ ಕಾರಣವಾಗುತ್ತದೆ. ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ನಿಮ್ಮ ದೇಹ ನಿಮಗೆ ಸೂಚನೆ ನೀಡುತ್ತದೆ ಅದನ್ನು ನಿರ್ಲಕ್ಷಿಸಬಾರದು. ಸಾಮಾನ್ಯವಾಗಿ ಮೂತ್ರವಿಸರ್ಜನೆಯ ಆವರ್ತನ ಮತ್ತು ಮೂತ್ರದ ಬಣ್ಣಗಳ ಮೂಲಕ ನಿರ್ಜಲೀಕರಣವನ್ನು ಕಂಡು ಹಿಡಿಯಬಹುದು. ನೀರು ಕಡಿಮೆ ಕುಡಿಯುವವರಿಗೆ ಮೂತ್ರದ ಮಟ್ಟವು ತುಂಬಾ ಕಡಿಮೆ ಇದ್ದು, ಮೂತ್ರ ಹಳದಿ ಬಣ್ಣಕ್ಕೆ ತಿರುಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಿರ್ಜಲೀಕರಣದಿಂದ ಉಂಟಾಗುವ ಸಮಸ್ಯೆಗಳೇನು?
ಸಾಮಾನ್ಯವಾಗಿ ದೇಹದ ನಿರ್ಜಲೀಕರಣವು ಸದ್ದಿಲ್ಲದೆ ಮೂತ್ರಪಿಂಡಗಳನ್ನು ಹಾನಿಗೊಳಿಸುತ್ತದೆ. ಜೊತೆಗೆ ಮೂತ್ರನಾಳದ ಸೋಂಕಿನ ಅಪಾಯವನ್ನು ಕೂಡ ಹೆಚ್ಚಿಸುತ್ತದೆ. ಅಲ್ಲದೆ ನೀರಿನ ಅಂಶ ಕಡಿಮೆಯಾದಾಗ ಮೂತ್ರಪಿಂಡಗಳು ಅತಿಯಾಗಿ ಕೆಲಸ ಮಾಡುತ್ತದೆ ಇದರಿಂದ ಕಲ್ಮಶಗಳು ಮತ್ತು ಮೂತ್ರಪಿಂಡದ ಕಲ್ಲುಗಳನ್ನು ಹೆಚ್ಚಾಗುವ ಅಪಾಯ ಇರುತ್ತದೆ. ಜೊತೆಗೆ ರಕ್ತ ಪೂರೈಕೆಯನ್ನು ಕಡಿಮೆ ಮಾಡುತ್ತದೆ. ಇದು ಅಂತಿಮವಾಗಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಗೆ (ಸಿಕೆಡಿ) ಕಾರಣವಾಗುತ್ತದೆ.

ನಿರ್ಜಲೀಕರಣವನ್ನು ತಡೆಯುವುದು ಹೇಗೆ?
ಪ್ರತಿದಿನ ದೊಡ್ಡ ಲೋಟಗಳಲ್ಲಿ ಕನಿಷ್ಠ ಎಂಟು ಲೋಟ ನೀರು ಕುಡಿಯುವುದು

ಬಾಯಾರಿಕೆಯಾಗದಿದ್ದರೂ ನೀರು ಕುಡಿಯುವುದು

ಹೈಡ್ರೀಕರಿಸಿದ ಹಣ್ಣು ಮತ್ತು ತರಕಾರಿಗಳನ್ನು ತಿನ್ನುವುದು

ಸಕ್ಕರೆ ಪಾನೀಯಗಳನ್ನು ಮಿತಿಗೊಳಿಸುವುದು

ಚಹಾ, ಕಾಫಿ, ಕಾರ್ಬೊನೇಟೆಡ್ ಪಾನೀಯಗಳು ಮತ್ತು ಪ್ಯಾಕೇಜ್ ಮಾಡಿದ ಹಣ್ಣಿನ ರಸಗಳ ಸೇವನೆಯನ್ನು ಕಡಿಮೆ ಮಾಡುವುದು

ಮನೆಯೊಳಗೆ ಕೆಲಸ ಮಾಡುವವರು ಅಥವಾ ಎಸಿಯಲ್ಲಿ ಕುಳಿತುಕೊಳ್ಳುವವರು ದಿನಕ್ಕೆ 6- 8 ಲೋಟ ನೀರು ಕುಡಿಯುವುದು ಒಳ್ಳೆಯದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ