Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖಮುಖಿ ಸಾಮಾಜಿಕ ಸ್ಪಂದನ ಸಂಸ್ಥೆ ಗೊರಬಾಳ್  ವತಿಯಿಂದ ಪ್ರಯಾಣಿಕರಿಗೆ ಕುಡಿಯುವ ನೀರಿನ ಅರವಟ್ಟಿಗೆ ಗೆ ಚಾಲನೆ 

Advertisement
ಇಲಕಲ್ :ಮುಖಮುಖಿ ಸಾಮಾಜಿಕ ಸ್ಪಂದನ ಸಂಸ್ಥೆ ಗೊರಬಾಳ್ ಇವರ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಹಾಗೂ ಅಕ್ಷರದ ಅಮ್ಮ ಸಾವಿತ್ರಿಬಾಯಿ ಫುಲೆ ಇವರ ಜಯಂತಿ ಅಂಗವಾಗಿ ಇಳಕಲ್ ಬಸ್ ನಿಲ್ದಾಣದಲ್ಲಿ ಸತತ 11 ವರ್ಷಗಳ ಉಚಿತ ಕುಡಿಯುವ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆಯನ್ನು ಇಂದು ದಿನಾಂಕ 28-04-2025 ರಂದು ಇಲಕಲ್ಲಿನ ಯುವ ಪತ್ರಕರ್ತರಾದ ಸೈಯದ್ ಸಿರಾಜ್ ಖಾಜಿ ಅವರು ರಿಬ್ಬನ್ ಕಟ್ ಮಾಡುವುದರ ಮೂಲಕ ಪ್ರಯಾಣಿಕರಿಗೆ ಕುಡಿಯುವ ನೀರಿನ ಅರವಟ್ಟಿಗೆಯನ್ನು ಚಾಲನೆಗೊಳಿಸಿದರು. ಈ ಸಮಾರಂಭದ ಕುರಿತು ಮಾತನಾಡಿದ ಸೈಯದ್ ಸಿರಾಜ್ ಖಾಜಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಸಮಾಜದಲ್ಲಿ ಸಾಮರಸ್ಯ , ಸಮಾಜದ ಏಳಿಗೆಗೆ ಶ್ರಮ ವಹಿಸಬೇಕು. ಪ್ರಜಾಪ್ರಭುತ್ವಕ್ಕೆ ಧಕ್ಕೆ ಆಗದಂತೆ ಎಲ್ಲರೂ ಸಂವಿಧಾನದ ಅಡಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಹೋಗಬೇಕು.

ಮುಂದುವರೆದು ಮಾತನಾಡಿ ಅಕ್ಷರದ ಅಮ್ಮ ಶ್ರೀಮತಿ ಸಾವಿತ್ರಿಬಾಯಿ ಪುಲೆ ಇವರ ಶೈಕ್ಷಣಿಕ ಕೊಡುಗೆ ಅಪಾರ ಪ್ರತಿ ವರ್ಷ ಇಂತಹ ಮಹಾನ್ ನಾಯಕ, ನಾಯಕಿಯರ ಜಯಂತಿಗಳನ್ನು ಆಚರಿಸಿದ್ದಕ್ಕೆ ಸಾರ್ಥಕವಾಗುತ್ತದೆ. ಮುಖಮುಖಿ ಸಾಮಾಜಿಕ ಸ್ಪಂದನ ಸಂಸ್ಥೆಯು ಕಳೆದ ಹತ್ತು ವರ್ಷಗಳ ಅವಧಿಕ್ಕಿಂತ ಹೆಚ್ಚು ಸಾಮಾಜಿಕ,ಶೈಕ್ಷಣಿಕ, ಬಡವರ ಏಳಿಗೆಗೆ ಕಟಿಬುದ್ಧವಾಗಿ ನಿಂತಿರುವುದು ಶ್ಲಾಘನೀಯ. ಇಳಕಲ್ಲಿನ ಗ್ರಾನೆಟ್ ಉದ್ದಿಮೆಗಾರರಾದ ಸಣ್ಣದುರ್ಗಪ್ಪ ಬಂಡಿ, ವೆಂಕಟೇಶ್ ಬಂಡಿ ಇವರು ಒಂದು ವಾರಗಳ ಕಾಲ ಸಾರ್ವಜನಿಕರಿಗೆ ಉಚಿತ ಶುದ್ಧ ಕುಡಿಯುವ ನೀರನ್ನು ಒದಗಿಸಿದ್ದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಶೇಖರಯ್ಯ ಹಿರೇಮಠ್, ಸಾರಿಗೆ ನಿಯಂತ್ರಕರಾದ ಮಹಾಂತೇಶ್ ಅರಳಿ, ವೀರೇಶ್ ಹಿರೇಮಠ ರಜಾಕ್ ಹುಬ್ಬಳ್ಳಿ ಭಾಷಾ ಸಾಬ್ ಹಾವೇರಿ ಪತ್ರಕರ್ತರಾದ ಕಾಸಿಂ ಅಲಿ ಮಕಾನದಾರ, ಮೆಹಬೊಬ ಡೋಟಿಹಾಳ ಮುಂತಾದವರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ