Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತ್ಯಾಜ ಕಸದಿಂದ ತಯಾರಿಕೆಯಾದ ಗೊಬ್ಬರ ಮಾರಾಟಕ್ಕೆ ಚಾಲನೆ

Advertisement
ಸಿರುಗುಪ್ಪ: ಕಸದಿಂದ ರಸವೆಂಬಂತೆ ತಯಾರಿಸಿದ ನಗರದಲ್ಲಿ ಸಂಗ್ರಹಿಸುವ ಹಸಿಕಸವನ್ನು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಗೊಬ್ಬರವನ್ನು ಖರೀದಿಸುವ ಮೂಲಕ ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಗೊಬ್ಬರ ಮಾರಾಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಿಂದ ಹಸಿ ತ್ಯಾಜ್ಯ ಗೊಬ್ಬರ, ಸಾವಯುವ ಗೊಬ್ಬರ ಉತ್ಪಾಧನೆ ಉತ್ತಮ ಕಾರ್ಯವಾಗಿದೆ.

ಮನೆಯ ಅಂಗಳ, ಮಹಡಿ, ಸುತ್ತಮುತ್ತಲಿನ ಜಾಗಗಳಲ್ಲಿ ಬೆಳೆಯುವ ಸಣ್ಣಪುಟ್ಟ ಸಸ್ಯಗಳಿಗೆ ರಸವತ್ತಾದ ಗೊಬ್ಬರದ ಅವಶ್ಯಕತೆಯಿದೆ. ಇದನ್ನು ಮನಗೊಂಡ ಗೊಬ್ಬರದ ಮಾರಾಟಕ್ಕೆ ಮುಂದಾಗಿರುವುದು ಶ್ಲಾಘನೀಯವಾಗಿದೆ ಎಂದರು. ನಗರಸಭೆ ಪೌರಾಯುಕ್ತ ಗಂಗಾಧರ ಅವರು ಮಾತನಾಡಿ ಸರ್ಕಾರಿ ವಸತಿ ನಿಲಯಗಳು, ಸರ್ಕಾರಿ ಕಛೇರಿಗಳಲ್ಲಿ ಸಸ್ಯ ಬೆಳವಣಿಗೆಗೆ ಗೊಬ್ಬರವನ್ನ ಉಚಿತವಾಗಿ ನೀಡಲಾಗುತ್ತದೆ.

ಸಾರ್ವಜನಿಕರು ತಮ್ಮ ಸಸ್ಯಗಳಿಗೂ ಗೊಬ್ಬರವನ್ನು ಬಳಸಲು ಕಿಲೋ ಗ್ರಾಂಗೆ ಕೇವಲ 2ರೂಪಾಯಿ ನೀಡುವ ಮೂಲಕ ತಮಗೆ ಅವಶ್ಯಕತೆಗನುವಾಗಿ ಪಡೆಯಬಹುದಾಗಿದೆ. ಮುಂದಿನ ದಿನಗಳಲ್ಲಿ ಮನೆಯಲ್ಲಿಯೇ ಗೊಬ್ಬರವನ್ನು ತಯಾರಿಸುವ ವಿಧಾನದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥರೆಡ್ಡಿ ಮಾತನಾಡಿ ಗೊಬ್ಬರವು ಉತ್ತಮ ಪೋಷಕಾಂಶಗಳನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ರೈತರಿಗೂ ಜಾಗೃತಿ ಮೂಡಿಸಲಾಗುವುದು ಎಂದರು.

ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ, ಉಪಾಧ್ಯಕ್ಷೆ ಯಶೋದಾಮೂರ್ತಿ, ಸದಸ್ಯ ಬಿ.ಎಮ್.ಅಪ್ಪಾಜಿ, ತಾಲೂಕು ಪಂಚಾಯಿತಿ ಇ.ಓ ಪವನ್ ಕುಮಾರ್.ಎಸ್.ದಂಡಪ್ಪನವರ್, ಪೋಲೀಸ್ ಉಪಾಧೀಕ್ಷಕ ಮಾಲತೇಶ ಕೂನಬೇವ, ಕ್ಷೇತ್ರ ಶಿಕ್ಷಣಾಧಿಕಾರಿ ಗುರ‍್ರಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರವರ್ಮ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರದೀಪ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.
ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ