Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆಗೆ ಚಾಲನೆ.

Advertisement
ಚನ್ನಮ್ಮನ ಕಿತ್ತೂರು : ಕಿತ್ತೂರು ತಾಲೂಕಿನ ನಿಚ್ಚಣಿಕಿ ಶ್ರೀ ಗುರು ಮಡಿವಾಳೇಶ್ವರ ಮಠದಿಂದ ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆಗೆ ಪೂಜ್ಯ ಪಂಚಾಕ್ಷರಿ ಮಹಾಸ್ವಾಮಿಗಳು, ಹಾಗೂ ರೈತರು ಯುವಕರು ಚಾಲನೆ ನೀಡಿದರು. ನಂತರ ಜ್ಯೋತಿ ಯಾತ್ರೆ ಕಿತ್ತೂರಿನ ಕೋಟೆ ಆವರಣಕ್ಕೆ ಆಗಮಿಸಿತು. ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು ಆಗಮಿಸಿ ಪೂಜೆ ಸಲ್ಲಿಸಿ ನಂತರ ಜ್ಯೋತಿ ಯಾತ್ರೆ ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ರಾಣಿ ಚನ್ನಮ್ಮನ ವೃತ್ತಕ್ಕೆ ಆಗಮಿಸಿತ್ತು ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಶ್ರೀ ಮ.ನಿ.ಪ್ರ. ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು, ಹಾಗೂ ಪೂಜ್ಯ ಶ್ರೀ ಮ.ನಿ.ಪ್ರ.ಶಿವಕುಮಾರ ಮಹಾಸ್ವಾಮಿಗಳು ಕಪ್ಪತಗುಡ್ಡ ನಂದಿವೇರಿ ಸಂಸ್ಥಾನಮಠ,ಡೋಣಿ ಗದಗ ಹಾಗೂ ರೈತ ಮುಖಂಡರು ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆಗೆ ಶುಭ ಕೊರಿದರು.
ಕಿತ್ತೂರಿನ ತಹಶೀಲ್ದಾರ ಕಚೇರಿ ಮುಂದೆ ರೈತರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಬೇಟಿ ನೀಡಿ ಮಾತನಾಡಿ ರೈತರು ನಡೆಸುತ್ತಿರುವ ನ್ಯಾಯಯುತ ಬೇಡಿಕೆಗಳಿಗೆ ನಮ್ಮ ಬೆಂಬಲ ಇದೆ ಎಂದು ಹೇಳಿದರು.



ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆ ಬಗ್ಗೆ ಭಾಲಚಂದ್ರ ಜಾಬಶೆಟ್ಟಿ ಅವರು ಮಾತನಾಡಿ ನಂದಿಕೃಷಿ. ನಂದಿ ಆದಾರಿತ ಉಳುಮೆಯಿಂದ ಸುಸ್ಥಿರ ಭೂಫಲವತ್ತತೆ ಕಾಯ್ದುಕೊಂಡು ಸುರಕ್ಷಿತ ಹಾಗೂ ಸುಸ್ಥಿರ ಆಹಾರ ಭದ್ರತೆಯನ್ನು ನಮ್ಮ ಪೂರ್ವಜರು ಹೊಂದಿದ್ದರು. ಆದರೆ ಈಗ ನಾವೆಲ್ಲರೂ ರಾಸಾಯನಿಕ ಕೃಷಿಯೆಡೆಗೆ ಆಕರ್ಷಿತಗೊಂಡಿರುವದರಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದ್ದು. ಆಹಾರ ಉತ್ಪಾದನೆಯಲ್ಲಿ ಇಳುವರಿ ಹಾಗೂ ಗುಣಮಟ್ಟದಲ್ಲಿ ಕುಸಿತವಾಗಿದ್ದರಿಂದ ರೈತ ಸಂಕಷ್ಟಕೀಡಾಗುತ್ತಿದ್ದಾನೆ ಹಾಗಾಗಿ ನಂದಿಕೃಷಿಯ ಪುನರುತ್ಥಾನದ ಅವಶ್ಯಕತೆಯಿದ್ದು. ರೈತರು ಪುನಃ ನಂದಿಕೃಷಿಯಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸುವುದಕ್ಕಾಗಿ ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆ ಆಯೋಜಿಸಲಾಗಿದೆ ಎಂದು ಹೇಳಿದರು. ರೈತ ಮುಖಂಡರಾದ ದಳವಾಯಿ ಅಪ್ಪೇಶ ಅವರು ಮಾತನಾಡಿದರು.‌

ವರದಿ:ಬಸವರಾಜ ಭಿಮರಾಣಿ.ಜಗದೀಶ ಕಡೋಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ