Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದಿಕರ್ಮಯೋಗಿ ಗ್ರಾಮಮಟ್ಟದ ಮಾಸ್ಟರ್ ತರಬೇತಿ ಕಾರ್ಯಗಾರಕ್ಕೆ ಚಾಲನೆ.

Advertisement
ಸಿರುಗುಪ್ಪ : ನಗರದ ಸಿ.ಡಿ.ಪಿ.ಓ ಸಭಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮ ನಿಮಿತ್ತ ಆದಿಕರ್ಮಯೋಗಿ ಅಭಿಯಾನದಡಿ ಗ್ರಾಮಮಟ್ಟದ ಮಾಸ್ಟರ್ ತರಬೇತಿ ಕಾರ್ಯಗಾರಕ್ಕೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರವರ್ಮ ಚಾಲನೆ ನೀಡಿದರು.

ನಂತರ ಮಾತನಾಡಿ ನಮ್ಮ ಬಳ್ಳಾರಿ ಜಿಲ್ಲೆಯಲ್ಲಿ ಶೇ.50ಕ್ಕೂ ಅಧಿಕ ಪರಿಶಿಷ್ಟ ಪಂಗಡ ಜನಾಂಗ ವಾಸವಿರುವ ಒಟ್ಟು 59 ಗ್ರಾಮಗಳು ಆದಿಕರ್ಮಯೋಗಿ ಅಭಿಯಾನದಡಿ ಸಮಗ್ರ ಗ್ರಾಮ ಉತ್ಕರ್ಷ ಯೋಜನೆಯಲ್ಲಿ ಆಯ್ಕೆಯಾಗಿದ್ದು, ತಾಲೂಕಿನಿಂದ ಶಾಲಿಗನೂರು, ಕರ್ಚಿಗನೂರು, ಅಕ್ಕತಂಗಿಯರಹಾಳ್, ಮಿಟ್ಟೆಸೂಗೂರು, ಹಳೇಕೋಟೆ ಸೇರಿ 5 ಗ್ರಾಮಗಳು ರಾಷ್ಟ್ರೀಯ ಮಟ್ಟದಿಂದ ಆಯ್ಕೆಯಾಗಿರುತ್ತವೆ.

ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಿರುತ್ತಾರೆ. ಈಗ ನಾವು ನಿಮಗೆ ಗ್ರಾಮ ಮಟ್ಟದ ಮಾಸ್ಟರ್ ಟ್ರೈನಿಂಗ್(ವಿ.ಎಮ್.ಟಿ.ಎಸ್) ತರಬೇತಿ ನೀಡಿ 5 ಗ್ರಾಮಗಳ ಅಭಿವೃದ್ದಿ ಮಟ್ಟದ ರೂಪುರೇಷೆಗಳು ಹಾಗೂ ಪರಿಶಿಷ್ಟ ವರ್ಗಗಳ ಜನಾಂಗಕ್ಕೆ ಸಿಗಬೇಕಾದ ಸೌಲಭ್ಯಗಳ ಬಗ್ಗೆ ಗ್ರಾಮಮಟ್ಟದಲ್ಲಿ ಸರ್ವೆ ನಡೆಸಿ ಆಯಾ ಗ್ರಾಮ ಪಂಚಾಯಿತಿಗಳಿಂದಲೂ ದೊರೆಯಬೇಕಾದ ಸೌಲಭ್ಯಗಳ ವರದಿಯನ್ನು ನೀಡಬೇಕು.

ಉದ್ದೇಶವಿಷ್ಟೇ ಗ್ರಾಮದಲ್ಲಿನ ಮೂಲಭೂತ ಸೌಲಭ್ಯಗಳಾದ ಆರೋಗ್ಯ, ಕುಡಿಯುವ ನೀರು, ರಸ್ತೆ, ಶಿಕ್ಷಣ ಸೇರಿದಂತೆ ವಿದ್ಯುತ್ ಇನ್ನಿತರ ಸಮಸ್ಯೆಗಳ ವರದಿ ತಯಾರಿಸಿ ನಮಗೆ ವರದಿ ನೀಡಿ ಆ ಗ್ರಾಮಗಳ ಶ್ರೇಯೋಭಿವೃದ್ದಿಗೆ ಸಹಕರಿಸಬೇಕೆಂದು ತಿಳಿಸಿದರು.

ತಾಲೂಕಿನಿಂದ ತರಬೇತಿ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಹೇಮಾವತಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ, ಸಮನ್ವಯ ಶಿಕ್ಷಣ ಸಂಯೋಜನಾಧಿಕಾರಿ ಡಾ.ವೀರೇಶ, ಹಿರಿಯ ಆರೋಗ್ಯ ನಿರೀಕ್ಷಕ ಮಹಮದ್ ಖಾಸೀಂ ಅವರಿಂದ ಎರಡು ದಿನಗಳ ಕಾಲ ತರಬೇತಿ ನೀಡಲಾಗುವುದು.

ಆದ್ದರಿಂದ ಗ್ರಾಮಲೆಕ್ಕಾಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಸಮಗ್ರ ಗ್ರಾಮದ ಅಭಿವೃದ್ದಿಗೆ ಅನುಕೂಲವಾಗುವ ತರಬೇತಿಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಇದೇ ವೇಳೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.

ವರದಿ : ಶ್ರೀನಿವಾಸ ನಾಯ್ಕ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ