Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಯ ಎಲ್ಲ ಗ್ರಾಪಂಗಳಲ್ಲಿ ದುಡಿಯೋಣ ಬಾ… ಅಭಿಯಾನ

Advertisement
ಬೆಳಗಾವಿ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮೇ 1 ರಿಂದ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ದುಡಿಯೋಣ ಬಾ… ಅಭಿಯಾನ” ಹಮ್ಮಿಕೊಳ್ಳಲಾಗಿದ್ದು, ಅರ್ಹ ಕೂಲಿಕಾರರು ಮನರೇಗಾದಡಿ ಉದ್ಯೋಗ ಪಡೆದುಕೊಳ್ಳಬಹುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.



ಈ ಅಭಿಯಾನದ ಮೂಲಕ ಅರ್ಹ ಕೂಲಿಕಾರರಿಗೆ ಮನರೇಗಾ ಯೋಜನೆಯ ಕುರಿತು ಮಾಹಿತಿ ನೀಡಲಾಗುತ್ತಿದ್ದು, ನರೇಗಾ ಯೋಜನೆಯಡಿ ಕೂಲಿಕಾರರಿಗೆ 100 ದಿನಗಳ ಅಕುಶಲ ಕೆಲಸವನ್ನು ಒದಗಿಸಲು ದುಡಿಯೋಣ ಬಾ ಅಭಿಯಾನವನ್ನು ಈಗಾಗಲೇ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಸಲಾಗುತ್ತಿದೆ.
ಅಭಿಯಾನದ ಉದ್ದೇಶಗಳು:
1. ನರೇಗಾ ಯೋಜನೆಯಡಿ ಒಳಗೊಳ್ಳದ ಕುಟುಂಬಗಳನ್ನು ಗುರುತಿಸಿ ಅಕುಶಲ ಕೆಲಸಕ್ಕಾಗಿ ನೊಂದಾಯಿಸುವುದು.
2. ನೊಂದಾಯಿತ ಕೂಲಿಕಾರರಿಗೆ ನಿರಂತರ ಅಕುಶಲ ಕೆಲಸವನ್ನು ಒದಗಿಸಿ ವಲಸೆ ಪ್ರವೃತ್ತಿಯನ್ನು ತಗ್ಗಿಸುವುದು.
3. ದುರ್ಬಲ ವರ್ಗದ ಕುಟುಂಬಗಳು ಹಾಗೂ ವಿಶೇಷ ಚೇತನರು, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು.
ಇದಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯತಿ ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಅದೇ ರೀತಿ ಈಗಾಗಲೇ ಮನರೇಗಾ ಯೋಜನೆಯಡಿ ಉದ್ಯೋಗ ಪಡೆದುಕೊಂಡು ಕೆಲಸ ಮಾಡುತ್ತಿರುವ ಎಲ್ಲ ಕೂಲಿಕಾರರಿಗೆ ಮೇ 1 ರಿಂದಲೇ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಶಿಬಿರ ಹಮ್ಮಿಕೊಂಡು ಕೂಲಿಕಾರರ ಆರೋಗ್ಯ ಕಾಪಾಡಿಕೊಳ್ಳಲಾಗುತ್ತಿದೆ. ಕೂಲಿಕಾರರು ಸಕ್ರಿಯವಾಗಿ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು.

ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ನೋಂದಾಯಿತ ಕೂಲಿಕಾರರ ರಜಿಸ್ಟರ್ 1 ರಲ್ಲಿನ ಮಾಹಿತಿಯಂತೆ ಕುಟುಂಬವಾರು ಪರಿಶೀಲಿಸಿ, ಸೇರ್ಪಡೆ ಮಾಡಬೇಕಾದ ಅಥವಾ ಡಿಲೀಟ್ ಮಾಡಬೇಕಾದ ಹೆಸರುಗಳನ್ನು ಅಪಡೇಟ್ ಮಾಡುವ ನಿಟ್ಟಿನಲ್ಲಿ ಮನೆ ಮನೆ ಭೇಟಿ ಮಾಡಿ ಜಾಬ್ ಕಾರ್ಡ್ ಪರಿಶೀಲನೆ ಅಭಿಯಾನ ಕೂಡ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಎಲ್ಲ ಅರ್ಹ ಕೂಲಿಕಾರರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ