LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಲಿ ದುರುಗೇಶ್ ಕಲ್ಮಂಗಿ ಆಗ್ರಹ

Advertisement
ಸಿಂಧನೂರು: ಜುಲೈ 4 ರಂದು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಸಮಿತಿ ಸಿಂಧನೂರು ಮಾನ್ಯ ತಹಸಿಲ್ದಾರ್ ಗೆ ಮನವಿ ಪತ್ರ ಸಲ್ಲಿಸಿ ಮೊನ್ನೆ ಸಿಂಧನೂರು ತಾಲೂಕಿನ ಗುಡದಮ್ಮ ಕ್ಯಾಂಪ್ ನ ಶರಣಬಸವೇಶ್ವರ ಹಿರಿಯ ಪ್ರಾಥಮಿಕ ಶಾಲಾ ಯಲ್ಲಿ ಎರಡನೇ ತರಗತಿ ಓದುತ್ತಿರುವ ದಲಿತ ಸಮುದಾಯದ ಅಖಿಲ್ ಎನ್ನುವ ವಿದ್ಯಾರ್ಥಿಯು ಮನೆಯಿಂದ ಶಾಲೆಗೆ ಹೋಗಿ ಶಾಲಾ ವಾಹನ ದಿಂದ ಕೆಳಗೆ ಇಳಿಯುವ ಸಮಯದಲ್ಲಿ ಆ ವಾಹನ ಚಾಲಕ ವಿದ್ಯಾರ್ಥಿಗೆ ಕಟ್ಟಿಗೆಯಿಂದ ಮೈಯಲ್ಲ ಬಾಸುಂಡೆ ಬರುವಂತೆ ದಳಿಸಿದ್ದು ನೋಡಿದರೆ ನಿಜಕ್ಕೂ ಇದು ಉದ್ದೇಶಪೂರ್ವಕವಾದ ಕೃತ್ಯ ಎನಿಸುತ್ತದೆ

ಅಷ್ಟೇ ಅಲ್ಲದೆ ಈಗಾಗಲೇ ಆ ಶಾಲೆಯ ಆಟೊಟಗಳಲ್ಲಿ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಲಾಗುತ್ತದೆ ಎನ್ನುವ ಆರೋಪಗಳು ಬಲವಾಗಿ ಕೇಳಿ ಬರುತ್ತಿವೆ ಈ ಮುಂಚೆಯೇ ಸಹ ಶಾಲೆಯ ಶಿಕ್ಷಕರು ಈ ವಿದ್ಯಾರ್ಥಿಯನ್ನು ಪದೇ ಪದೇ ಹೊಡೆದಿದ್ದು ಯಾರಿಗೆ ಹೇಳಿದಂತೆ ಆ ವಿದ್ಯಾರ್ಥಿಗೆ ಬೆದರಿಕೆ ಹಾಕಲಾಗಿದೆ ಎಂದು ವಿದ್ಯಾರ್ಥಿಯ ಕುಟುಂಬಸ್ಥರು ಆರೋಪಿಸಿದ್ದರು.



ಆದ್ದರಿಂದ ಈ ಕೂಡಲೇ ತಾವುಗಳು ಆ ಶಾಲೆಯ ವಾಹನ ಚಾಲಕನ ವಿರುದ್ಧ ಸ್ವಯಂ ದೂರು ದಾಖಲಾಯಿಸಿಕೊಂಡು ಮತ್ತು ಆ ಶಾಲೆಯ ಆಡಳಿತ ಮಂಡಳಿ ವಿರುದ್ಧ ಜಾತಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ದೂರು ದಾಖಲಾಹಿಸಿಕೊಂಡು ಆ ಶಾಲೆಯ ಮಾನ್ಯತೆ ರದ್ದು ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ಸಿಂಧನೂರು ಈ ಮನವಿ ಪತ್ರದ ಮೂಲಕ ಒತ್ತಾಯಿಸುತ್ತದೆ.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕಾಧ್ಯಕ್ಷ ದುರುಗೇಶ್ ಕಲ್ಮಗಿ, ಚನ್ನಬಸವ ಯಾಪಲ ಪರ್ವಿ ಜಿಲ್ಲಾ ಉಪಾಧ್ಯಕ್ಷರು. ವೀರೇಶ್ ದಿದ್ದಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ. ಜಂಬಣ್ಣ ಉಪ್ಪಲ ದೊಡ್ಡಿ. ಚಿಕ್ಕೋರಪ್ಪ. ಶರಣಬಸವ ಬುನ್ನಟ್ಟಿ. ರಮೇಶ್ ಬಸಾಪುರ. ಇನ್ನು ಅನೇಕರಿದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ