Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಆಚರಣೆಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ :ಜಿಲ್ಲಾ ಯುವ ಕಲಾವಿದರ ಬಳಗದಿಂದ ಆರೋಪ

Advertisement
ಪ್ರತಿವರ್ಷದಂತೆ ಈ ವರ್ಷವೂ ದಸರಾ ಆಚರಿಸುವಂತೆ ಆಗ್ರಹ

ಚಾಮರಾಜನಗರ: ಜಿಲ್ಲೆಯ ಸಂಸದರು, ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಶಾಸಕರ ನಿರ್ಲಕ್ಷ್ಯದಿಂದ ರಾಜ್ಯ ಸರ್ಕಾರ ಚಾಮರಾಜನಗರ ದಸರಾ ಆಚರಣೆ ಮಾಡುತ್ತಿಲ್ಲ ಎಂದು ಚಾಮರಾಜನಗರ ಜಿಲ್ಲಾ ಯುವ ಕಲಾವಿದರ ಬಳಗದ ಸದಸ್ಯ ಶಿವಶಂಕರ್ ಎನ್.ಚಟ್ಟು ಆರೋಪಿಸಿದರು.

ರಾಜ್ಯ ಸರ್ಕಾರ 2007 ರಿಂದ ಚಾಮರಾಜನಗರದಲ್ಲಿ ಗ್ರಾಮೀಣ ದಸರಾ ಎಂಬ ಹೆಸರಿನಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿತ್ತು. 2013 ರಿಂದ ಚಾಮರಾಜನಗರ ದಸರಾ ಎಂಬ ಹೆಸರಿನಿಂದಲೇ ದಸರಾ ಉತ್ಸವಗಳನ್ನು ಆಯೋಜನೆ ಮಾಡಿಕೊಂಡು ಬಂದಿದೆ

ಆದರೆ ಸೆ.20 ರಿಂದ ಅ.2 ರವರೆಗೆ ನಡೆಯಲಿರುವ ದಸರಾ ಆಚರಣೆಯನ್ನು ಚಾಮರಾಜನಗರದಲ್ಲಿ ನಡೆಸುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು. ಜಿಲ್ಲೆಯ ಸಂಸದರು, ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಶಾಸಕರ ಇಚ್ಛಾಶಕ್ತಿ ಕೊರತೆಯನ್ನು ತೋರಿಸುತ್ತದೆ. ಒಂದು ವೇಳೆ ಚಾಮರಾಜನಗರ ದಸರಾ ಆಚರಣೆ ಮಾಡದಿದ್ದರೇ, ಜನಪ್ರತಿನಿಧಿಗಳಿಗೆ ಇದು ಕಪ್ಪುಚುಕ್ಕಿಯಾಗಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



ಕೋವಿಡ್ ಬಳಿಕ ಕಲಾವಿದರಿಗೆ ಸೂಕ್ತ ರೀತಿಯ ಕಾರ್ಯಕ್ರಮವಾಗಲಿ, ವೇದಿಕೆಗಳಾಗಲಿ ಸಿಗುತ್ತಿಲ್ಲ.

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿದರು ಇದ್ದು, ಅವರೆಲ್ಲರೂ ಮೈಸೂರಿಗೆ ಹೋಗಲು ಸಾಧ್ಯವಿಲ್ಲ. ಅದಲ್ಲದೇ ಜಿಲ್ಲೆಯ ಸಾರ್ವಜನಿಕರು ಕೂಡ ಮೈಸೂರಿಗೆ ಬಂದು ದಸರಾ ವೈಭವವನ್ನು ವೀಕ್ಷಣೆ ಮಾಡಲು ಸಾಧ್ಯವಿಲ್ಲ. ಆಗಾಗಿ ಈಗಲಾದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಚಾಮರಾಜನಗರ ದಸರಾ ಆಚರಣೆ ಮಾಡಬೇಕು

ಇಲ್ಲವಾದರೇ ಮುಂದಿನ ದಿನಗಳಲ್ಲಿ ಕಲಾವಿದರೆಲ್ಲರೂ ಸೇರಿ ಜನಪ್ರತಿನಿಧಿಗಳಿಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ರಂಗಭೂಮಿ ಕಲಾವಿದ ದಡದಹಳ್ಳಿ ರಮೇಶ್, ರಮೇಶ್ ಪಾಪಯ್ಯ, ಸುಶೀಲಾ ರಾಮಸಮುದ್ರ, ಜಾನಪದ ಗಾಯಕ ಕೃಷ್ಣಮೂರ್ತಿ ಚಂಗಚಹಳ್ಳಿ, ಸ್ವಾಮಿ ಹೊಂಗನೂರು ಹಾಜರಿದ್ದರು.

ಜಿಲ್ಲೆಯ ಎಲ್ಲಾ ಕಲಾವಿದರು ಮೈಸೂರಿಗೆ ಹೋಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆಗಾಗಿ ಜಿಲ್ಲೆಯ ಸಂಸದರು, ಶಾಸಕರು ಕಲಾವಿದರ ಸಂಕಷ್ಟವನ್ನು ಅರ್ಥಮಾಡಿಕೊಂಡು

ಚಾಮರಾಜನಗರ ದಸರಾ ಆಚರಣೆ ಮಾಡಬೇಕು. ಈ ಮೂಲಕ ಹಿರಿಯ ಕಲಾವಿದರಿಗೆ ಗೌರವ ಮತ್ತು ಯುವ ಕಲಾವಿದರಿಗೆ ಪ್ರೋತ್ಸಾಹವನ್ನು ನೀಡಬೇಕು.ಅವತಾರ್ ಪ್ರವೀಣ್, ನೃತ್ಯ ತರಬೇತುದಾರ

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ