LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಿಕ್ಷಣಾಧಿಕಾರಿಗಳ ಶಾಲಾ ಭೇಟಿ, ಶೈಕ್ಷಣಿಕ ಪ್ರಗತಿ, ದಾಖಲಾತಿ ಪರಿಶೀಲನೆ

Advertisement
ತುರುವೇಕೆರೆ: ತಾಲೂಕಿನ ವಿವಿಧ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಶುಕ್ರವಾರ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗು ದಾಖಲಾತಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಕಸಬಾ ಮತ್ತು ದಂಡಿನಶಿವರ ಹೋಬಳಿ ವ್ಯಾಪ್ತಿಯ ಕಲ್ಕೆರೆ, ದೊಡ್ಡಗೋರಾಘಟ್ಟ, ಸಿದ್ದನಹಟ್ಟಿ, ಮುನಿಯೂರು, ಮಾದಿಹಳ್ಳಿ, ತಾಳ್ಕೆರೆ, ಅರಳೀಕೆರೆ, ಹರಿಕಾರನಹಳ್ಳಿ, ಬಾಣಸಂದ್ರ, ಲೋಕಮ್ಮನಹಳ್ಳಿ, ಪಟ್ಟಣದ ವಿದ್ಯಾರಣ್ಯ ಪ್ರೌಢ ಶಾಲೆ, ಜಿಜೆಸಿ, ದೊಂಬರನಹಳ್ಳಿ, ಆನೇಕೆರೆ ಗ್ರಾಮಗಳ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಪಾಠ ಶಾಲೆ, ಸರ್ಕಾರಿ ಪ್ರೌಢ ಶಾಲೆ ಹಾಗು ಅನುದಾನಿತ ಪ್ರೌಢ ಶಾಲೆಗಳಿಗೆ ಭೇಟಿ ನೀಡಿದರು.

ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕಾರ್ಯವೈಖರಿ, ಮಕ್ಕಳ ತರಗತಿವಾರು ಹಾಜರಾತಿ, ದಾಖಲಾತಿ, ಪಠ್ಯಪುಸ್ತಕ, ಸಮವಸ್ತ್ರ ವಿತರಣೆ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಸಮಪರ್ಕವಾಗಿ ನಡೆಯುತ್ತಿರುವ ಬಗ್ಗೆ ಮಕ್ಕಳಿಂದ ಕೇಳಿ ಮಾಹಿತಿ ಪಡೆದುಕೊಂಡರು.

ಇವುಗಳ ಜೊತೆಗೆ ತರಗತಿವಾರು ಸೇತುಬಂಧ ಮತ್ತು ಸದರಿ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶಮುಖಿ ಕಾರ್ಯಚಟುವಟಿಕೆಗಳು ಹಾಗು ಪ್ರತಿ ವಿದ್ಯಾರ್ಥಿಗೂ ಕಡ್ಡಾಯವಾಗಿ ಓದು, ಬರಹ, ಸರಳ ಲೆಕ್ಕಾಚಾರ ಗಣಿತ ಬರುವಂತೆ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಮಾಡಬೇಕೆಂದು ಹೇಳಿದರು. ಜೊತೆಗೆ ಮಕ್ಕಳು ನಿರಂತರ ಗೈರಾಗದಂತೆ ನೋಡಿಕೊಳ್ಳಬೇಕು. ಒಟ್ಟಾರೆ ಶಾಲೆಯ ಫಲಿತಾಂಶ ಶೇಕಡ ನೂರರಷ್ಟು ಬರುವಂತೆ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶೀ ಸೋಮೇಶ್ವರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶಾಂತರಾಜು, ಶೆಟ್ಟಿಗೊಂಡನಹಳ್ಳಿ ಶಾಲೆಯ ವಾಸು, ಸಹ ಶಿಕ್ಷಕರು ಇದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ