LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶೈಕ್ಷಣಿಕ ವ್ಯವಸ್ಥೆ, ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ: ಸಂಪುಟ ಉಪಸಮಿತಿ ಮಹತ್ವದ ಚರ್ಚೆ

Advertisement

ಬೆಂಗಳೂರು: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ರಚಿಸಲಾಗಿರುವ 'ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಶಿಕ್ಷಣ ಸುಧಾರಣೆಗಳ ಕುರಿತು ಸಂಪುಟ ಉಪಸಮಿತಿ'ಯ ಮೊದಲ ಸಭೆ ಇಂದು ವಿಧಾನಸೌಧದ ಸಮಿತಿ ಕೊಠಡಿ ಸಂಖ್ಯೆ 313ರಲ್ಲಿ ನಡೆಯಿತು.

ಸಭೆಯಲ್ಲಿ ಸಮಿತಿಯ ಸದಸ್ಯರಾದ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್‌.ಕೆ. ಅತೀಕ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್‌, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಉದ್ದೇಶದಿಂದ ಮುನ್ನಡೆಸುತ್ತಿರುವ 'ಛಾತ್ರೋಂ ಕಿ ಗೂಂಜ್'ವಿದ್ಯಾರ್ಥಿ ಚಳವಳಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವಿದ್ಯಾರ್ಥಿಗಳ ಸಮಸ್ಯೆಗಳು ಹಾಗೂ ಅವರ ಆಕಾಂಕ್ಷೆಗಳನ್ನು ಅರಿತು ಸೂಕ್ತ ಸುಧಾರಣೆಗಳನ್ನು ಜಾರಿಗೆ ತರುವ ಉದ್ದೇಶದಿಂದ ರಚಿಸಲಾದ ಸಂಪುಟ ಉಪಸಮಿತಿಯ ಮೊದಲ ಸಭೆಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿ ಕೈಗೊಳ್ಳಬೇಕಾದ ಸುಧಾರಣೆಗಳ ಕುರಿತು ಆರು ಪ್ರಮುಖ ಅಂಶಗಳ ಕುರಿತು ಚರ್ಚಿಸಲಾಯಿತು.

1. ಪರೀಕ್ಷೆಗಳು ಮತ್ತು ನೇಮಕಾತಿಗಳ ಸಮಗ್ರತೆ

2 . ಶಿಕ್ಷಣದ ವೆಚ್ಚ, ಶುಲ್ಕ ಹಾಗೂ ಕೋಚಿಂಗ್ ಕೇಂದ್ರಗಳ ನಿಯಂತ್ರಣ

3. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಗುಣಮಟ್ಟ

4 . ಪಠ್ಯಕ್ರಮ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಸಂಪರ್ಕ

5. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ

6 . ಪ್ರವೇಶಾವಕಾಶ ಮತ್ತು ಸಮಾನತೆ

ತಜ್ಞರ ಅಭಿಪ್ರಾಯ ಸಂಗ್ರಹಿಸಲು ಮಧು ಬಂಗಾರಪ್ಪ ಸಲಹೆ

ಈ ಮಹತ್ವದ ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, "ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ತಜ್ಞರ ಅಭಿಪ್ರಾಯ ಸಂಗ್ರಹಿಸುವುದು ಅತ್ಯಂತ ಮುಖ್ಯ. ಮೊದಲು ತಜ್ಞರ ಸಭೆ ಕರೆದು ಅವರ ಸಲಹೆಗಳನ್ನು ಪಡೆಯಬೇಕು. ಬಳಿಕ ಅಜೆಂಡಾದ ಪ್ರತಿಯೊಂದು ವಿಷಯದ ಬಗ್ಗೆ ಸಮಗ್ರವಾದ ಮಾಹಿತಿ ಕಲೆ ಹಾಕಿ, ಮುಂದುವರಿಯುವುದು ಸೂಕ್ತ" ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದಲೂ ಮಾಹಿತಿ ಸಂಗ್ರಹಿಸಬೇಕಾಗಿದೆ. ಇದಕ್ಕಾಗಿ ವ್ಯಾಪಕವಾದ ಪ್ರಚಾರಮಾಡುವ ಕೆಲಸವಾಗಬೇಕು. ಪೂರ್ವಭಾವಿಯಾಗಿ ತಜ್ಞರ ಸಭೆ ನಡೆಸಿದರೆ ಅಜೆಂಡಾದ ವಿಷಯಗಳ ಕುರಿತು ಪರಿಣಾಮಕಾರಿಯಾಗಿ ಚರ್ಚಿಸಲು ಅನುಕೂಲವಾಗಲಿದೆ.

ನಮ್ಮ ಈ ಸಮಿತಿಯಿಂದ ಶಿಕ್ಷಣ ವ್ಯವಸ್ಥೆಯಲ್ಲಿ ನಿಜವಾದ ಬದಲಾವಣೆ ಆಗಬೇಕು"ಎಂಬ ಆಶಯವನ್ನು ಸಚಿವ ಮಧು ಬಂಗಾರಪ್ಪ ವ್ಯಕ್ತಪಡಿಸಿದರು.

ಸಾರ್ವಜನಿಕರಿಂದ ಸಲಹೆ ಪಡೆಯಲು ವೆಬ್‌ಸೈಟ್

ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರಿಂದ ಶಿಕ್ಷಣ ಸುಧಾರಣೆ ಕುರಿತು ಸಲಹೆಗಳನ್ನು ಸ್ವೀಕರಿಸಲು ಪ್ರತ್ಯೇಕ ವೆಬ್‌ಸೈಟ್ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಅವರ ಆಕಾಂಕ್ಷೆಗಳನ್ನು ನೇರವಾಗಿ ತಿಳಿದುಕೊಂಡು, ಅವುಗಳ ಆಧಾರದ ಮೇಲೆ ಸುಧಾರಣಾ ಕ್ರಮಗಳನ್ನು ರೂಪಿಸುವ ಅಗತ್ಯವನ್ನು ಸದಸ್ಯರು ಒತ್ತಿ ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ISRO ಮತ್ತೊಂದು ಅಭೂತಪೂರ್ವ ಸಾಧನೆ : ಇಒಎಸ್-05 ಯಶಸ್ವಿ ಉಡಾವಣೆ ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು ಗೌರಿ-ಗಣೇಶ ಹಬ್ಬ : 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನ ಓಡಿಸಲು ಸಕಲ ಸಿದ್ಧತೆಸ್ಮೃತಿ ಮಂದಾನಾ ಹೊಸ ವಿಕ್ರಮಸ್ಮೃತಿ ಮಂದಾನಾ ಭರ್ಜರಿ ಶತಕಅಮೆರಿಕದಲ್ಲಿ ಹಲ್ಲು ಕೀಳಿಸಲು ₹2.37 ಲಕ್ಷ ಬಿಲ್ : ಭಾರತವೇ ಬೆಸ್ಟ್ ಎಂದ ವ್ಯಕ್ತಿ ಶೈಕ್ಷಣಿಕ ವ್ಯವಸ್ಥೆ, ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ: ಸಂಪುಟ ಉಪಸಮಿತಿ ಮಹತ್ವದ ಚರ್ಚೆ20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ಬೈಕ್ ಸವಾರನ ಹೆಲ್ಮೆಟ್ ಒಡೆದು ಅಟ್ಟಹಾಸ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ FIR ಜಪಾನ್ ಏಶಿಯನ್ ಗೇಮ್ಸ್ ಗೇ ವಿವಿಎಸ್ ಲಕ್ಶ್ಮ ಣ್ ಟೀಮ್ ಇಂಡಿಯಾಗೇ ಹೆಡ್ ಕೋಚ್ ಸಾಧ್ಯತೆ