ಬೆಂಗಳೂರು: ವಿಧಾನಸಭೆ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸಭಾಪತಿ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ.
ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಆಡಳಿತಾರೂಢ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದ್ದರೂ ಪ್ರತಿರೋಧ ದಾಖಲಿಸುವ ಉದ್ದೇಶದಿಂದ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿದೆ.
ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಮೊಹಮ್ಮದ್ ಅವರು ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಮೈತ್ರಿಕೂಟದ ಅಭ್ಯರ್ಥಿಯಾಗಿ ಪಿ.ಹೆಚ್. ಪೂಜಾರ ಅವರು ಕೂಡ ನಾಮಪತ್ರ ಸಲ್ಲಿಸಿದ್ದಾರೆ.


