Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರು ತಮ್ಮ ಆರೋಗ್ಯದ ಕಡೆ ಗಮನಹರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಸಂಕನೂರ

Advertisement
ಕಲಘಟಗಿ: -ನೌಕರರು ತಮ್ಮ ಆರೋಗ್ಯದ ಕಡೆ ಗಮನಹರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್. ವಿ ಸಂಕನೂರ ಹೇಳಿದರು.ಪಟ್ಟಣದಲ್ಲಿ ನಿರ್ಮಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕ ಶಾಖೆಯ ನೂತನ ಕಟ್ಟಡದ ಸಂಕೀರ್ಣ ಶನಿವಾರ ಉದ್ಘಾಟಿಸಿ ಮಾತನಾಡಿದರು.



ರಾಜ್ಯ ಸರ್ಕಾರ ಈಗಾಗಲೇ 7 ನೇ ವೇತನ ಆಯೋಗ ಜಾರಿಗೆ ತಂದಿದ್ದು ಸಂತಸದ ವಿಷಯವಾಗಿದೆ ನೌಕರರ ಮುಂದಿನ ಬೇಡಿಕೆ ಎನ್ ಪಿಎಸ್ ರದ್ದು ಪಡಿಸಿ ಓಪಿಎಸ್ ಜಾರಿಗೆ ತರುವದಾಗಿದೆ ನಾವು ಕೂಡಾ ಬರುವ ದಿನಗಳಲ್ಲಿ ಸದನದಲ್ಲಿ ಒಪಿಎಸ್ ಜಾರಿಗೆ ತರಲು ಸರ್ಕಾರದ ಗಮನ ಸೆಳೆದು ನಿಮ್ಮ ಜೊತೆ ಕೈಜೋಡಿಸುತ್ತೇನೆ ಎಂದರು.ನನ್ನ ಅನುದಾನದಲ್ಲಿ ನೌಕರರ ಸಂಘದ ಕಟ್ಟಡಕ್ಕೆ ಈಗಾಗಲೇ 8 ಲಕ್ಷ ಅನುದಾನ ನೀಡಿದ್ದು ಬರುವ ದಿನಗಳಲ್ಲಿ ಸಾಧ್ಯವಾದರೆ ಮತ್ತೆ ನೀಡುವದಾಗಿ ಭರವಸೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಮಾತನಾಡಿ ದೇಶದ ಒಂದು ಭಾಗ ಸರ್ಕಾರಿ ನೌಕರರ ವರ್ಗದ ಮೇಲೆ ನಿಂತಿದೆ ನೀವುಗಳು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದರೆ ಸರ್ಕಾರಕ್ಕೆ ಯಾವುದು ದೊಡ್ಡದಲ್ಲ ಜನರು ನಿಮ್ಮ ಕಡೆ ದಿನನಿತ್ಯ ರೈತರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರು ಹಲವು ಕೆಲಸ ಕಾರ್ಯಕ್ಕಾಗಿ ಬಂದಾಗ ಅವರ ಸಮಸ್ಯೆಗೆ ಸ್ಪಂದಿಸಲು ಮನವಿ ಮಾಡಿದರು.

ಸಚಿವ ಸಂತೋಷ್ ಲಾಡ್ ಅವರು ಕೂಡಾ ಕಟ್ಟಡಕ್ಕೆ 25 ಲಕ್ಷ ಅನುದಾನ ನೀಡಿದ್ದಾರೆ ಹಲವು ಸಹಾಯ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಿಸಿದ್ದೀರಿ ನೌಕರ ವರ್ಗದವರ ಕೆಲಸದ ಒತ್ತಡದ ನಡುವೆ ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಂಡು ಕಟ್ಟಡ ನಿರ್ಮಾಣ ಮಾಡಿದ್ದು ಉತ್ತಮ ಕಾರ್ಯವಾಗಿದೆ ಎಂದರು.ನೌಕರ ಸಂಘದ ತಾಲ್ಲೂಕ ಅಧ್ಯಕ್ಷ ಆರ್. ಎಂ ಹೊಲ್ತಿಕೋಟಿ ಮಾತನಾಡಿ ಹಲವು ಇಲಾಖೆಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇರುವದರಿಂದ ಕೆಲವರು ಒತ್ತಡದ ನಡುವೆ ಕೆಲಸ ನಿರ್ವಹಿಸುವಂತಾಗಿದೆ ಸರ್ಕಾರ ಕೂಡಲೇ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್. ಎಫ್ ಸಿದ್ದನಗೌಡ್ರ, ಸಚಿವ ಸಂತೋಷ್ ಲಾಡ್ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ,ತಹಸೀಲ್ದಾರ ವಿರೇಶ ಮುಳಗುಂದಮಠ, ಬಿಇಓ ಉಮಾದೇವಿ ಬಸಾಪುರ, ಬಸವರಾಜ ಅಂಗಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎ. ಜೆ ಯೋಗಪ್ಪನವರ, ಶಿಕ್ಷಕರಾದ ಐ. ವಿ ಜವಳಿ, ಆರ್. ಎಸ್ ಜಂಬಗಿ, ರಾಜು ಲಮಾಣಿ ಇನ್ನಿತರರು ಇದ್ದರು.

ವರದಿ : ಶಶಿಕುಮಾರ ಕಲಘಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ