Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರು ತಮ್ಮ ಆರೋಗ್ಯದ ಕಡೆ ಗಮನಹರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಸಂಕನೂರ

Advertisement
ಕಲಘಟಗಿ: -ನೌಕರರು ತಮ್ಮ ಆರೋಗ್ಯದ ಕಡೆ ಗಮನಹರಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್. ವಿ ಸಂಕನೂರ ಹೇಳಿದರು.ಪಟ್ಟಣದಲ್ಲಿ ನಿರ್ಮಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕ ಶಾಖೆಯ ನೂತನ ಕಟ್ಟಡದ ಸಂಕೀರ್ಣ ಶನಿವಾರ ಉದ್ಘಾಟಿಸಿ ಮಾತನಾಡಿದರು.



ರಾಜ್ಯ ಸರ್ಕಾರ ಈಗಾಗಲೇ 7 ನೇ ವೇತನ ಆಯೋಗ ಜಾರಿಗೆ ತಂದಿದ್ದು ಸಂತಸದ ವಿಷಯವಾಗಿದೆ ನೌಕರರ ಮುಂದಿನ ಬೇಡಿಕೆ ಎನ್ ಪಿಎಸ್ ರದ್ದು ಪಡಿಸಿ ಓಪಿಎಸ್ ಜಾರಿಗೆ ತರುವದಾಗಿದೆ ನಾವು ಕೂಡಾ ಬರುವ ದಿನಗಳಲ್ಲಿ ಸದನದಲ್ಲಿ ಒಪಿಎಸ್ ಜಾರಿಗೆ ತರಲು ಸರ್ಕಾರದ ಗಮನ ಸೆಳೆದು ನಿಮ್ಮ ಜೊತೆ ಕೈಜೋಡಿಸುತ್ತೇನೆ ಎಂದರು.ನನ್ನ ಅನುದಾನದಲ್ಲಿ ನೌಕರರ ಸಂಘದ ಕಟ್ಟಡಕ್ಕೆ ಈಗಾಗಲೇ 8 ಲಕ್ಷ ಅನುದಾನ ನೀಡಿದ್ದು ಬರುವ ದಿನಗಳಲ್ಲಿ ಸಾಧ್ಯವಾದರೆ ಮತ್ತೆ ನೀಡುವದಾಗಿ ಭರವಸೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಮಾತನಾಡಿ ದೇಶದ ಒಂದು ಭಾಗ ಸರ್ಕಾರಿ ನೌಕರರ ವರ್ಗದ ಮೇಲೆ ನಿಂತಿದೆ ನೀವುಗಳು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದರೆ ಸರ್ಕಾರಕ್ಕೆ ಯಾವುದು ದೊಡ್ಡದಲ್ಲ ಜನರು ನಿಮ್ಮ ಕಡೆ ದಿನನಿತ್ಯ ರೈತರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದವರು ಹಲವು ಕೆಲಸ ಕಾರ್ಯಕ್ಕಾಗಿ ಬಂದಾಗ ಅವರ ಸಮಸ್ಯೆಗೆ ಸ್ಪಂದಿಸಲು ಮನವಿ ಮಾಡಿದರು.

ಸಚಿವ ಸಂತೋಷ್ ಲಾಡ್ ಅವರು ಕೂಡಾ ಕಟ್ಟಡಕ್ಕೆ 25 ಲಕ್ಷ ಅನುದಾನ ನೀಡಿದ್ದಾರೆ ಹಲವು ಸಹಾಯ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಿಸಿದ್ದೀರಿ ನೌಕರ ವರ್ಗದವರ ಕೆಲಸದ ಒತ್ತಡದ ನಡುವೆ ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಂಡು ಕಟ್ಟಡ ನಿರ್ಮಾಣ ಮಾಡಿದ್ದು ಉತ್ತಮ ಕಾರ್ಯವಾಗಿದೆ ಎಂದರು.ನೌಕರ ಸಂಘದ ತಾಲ್ಲೂಕ ಅಧ್ಯಕ್ಷ ಆರ್. ಎಂ ಹೊಲ್ತಿಕೋಟಿ ಮಾತನಾಡಿ ಹಲವು ಇಲಾಖೆಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇರುವದರಿಂದ ಕೆಲವರು ಒತ್ತಡದ ನಡುವೆ ಕೆಲಸ ನಿರ್ವಹಿಸುವಂತಾಗಿದೆ ಸರ್ಕಾರ ಕೂಡಲೇ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.

ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್. ಎಫ್ ಸಿದ್ದನಗೌಡ್ರ, ಸಚಿವ ಸಂತೋಷ್ ಲಾಡ್ ಆಪ್ತ ಕಾರ್ಯದರ್ಶಿ ಸೋಮಶೇಖರ ಬೆನ್ನೂರ,ತಹಸೀಲ್ದಾರ ವಿರೇಶ ಮುಳಗುಂದಮಠ, ಬಿಇಓ ಉಮಾದೇವಿ ಬಸಾಪುರ, ಬಸವರಾಜ ಅಂಗಡಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎ. ಜೆ ಯೋಗಪ್ಪನವರ, ಶಿಕ್ಷಕರಾದ ಐ. ವಿ ಜವಳಿ, ಆರ್. ಎಸ್ ಜಂಬಗಿ, ರಾಜು ಲಮಾಣಿ ಇನ್ನಿತರರು ಇದ್ದರು.

ವರದಿ : ಶಶಿಕುಮಾರ ಕಲಘಟಗಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ