Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 5 ರಂದು ಬಿಜೆಪಿ ಯುವಮೋರ್ಚಾದಿಂದ ಪರಿಸರ ದಿನಾಚರಣೆ : ತೀರ್ಥಕುಮಾರ್

Advertisement

ತುರುವೇಕೆರೆ : ತಾಲ್ಲೂಕು ಬಿಜೆಪಿ ಯುವಮೋರ್ಚಾ ವತಿಯಿಂದ ಜೂನ್ 5 ವಿಶ್ವಪರಿಸರ ದಿನದಂದು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವಮೋರ್ಚಾ ಅಧ್ಯಕ್ಷ ತೀರ್ಥಕುಮಾರ್ (ತಿಲಿ) ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ಭೂಮಿ, ನಮ್ಮ ಪರಿಸರ, ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆಯಡಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಪ್ರತಿ ಬೂತ್ ನಲ್ಲಿ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಪರಿಸರ ಉಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು. 

ಪರಿಸರ ದಿನಾಚರಣೆಯಂದು ನಡೆಯುವ ಈ ಸಸಿ ನೆಡುವ ಕಾರ್ಯಕ್ರಮಕ್ಕೆ ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಚಾಲನೆ ನೀಡಲಿದ್ದು, ಭಾರತೀಯ ಜನತಾ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾಗರೀಕರೂ ಸಹ ಈ ಪರಿಸರ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬಹುದಾಗಿದೆ. ಪ್ರತಿಯೊಬ್ಬರೂ ತಮ್ಮ ತಾಯಿಯವರ ಹೆಸರಿನಲ್ಲಿ ಒಂದು ಗಿಡವನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪ್ರಕೃತಿ ಸಂಪತ್ತನ್ನು ಉಳಿಸಲು ನಮ್ಮೊಂದಿಗೆ ಸಹಕಾರ ನೀಡಬೇಕೆಂದರು.
ವರದಿ: ಗಿರೀಶ್ ಕೆ ಭಟ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಡಿ. ಕೆ ಶಿವಕುಮಾರ್ ಪಟ್ಟಾಭಿಷೇಕ : ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆಜೂನ್ 5 ರಂದು ಬಿಜೆಪಿ ಯುವಮೋರ್ಚಾದಿಂದ ಪರಿಸರ ದಿನಾಚರಣೆ : ತೀರ್ಥಕುಮಾರ್ಸತೀಶ್ ಜಾರಕಿಹೊಳಿಗೆ ಕೈತಪ್ಪಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ : ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟವೆಸ್ಟ್ ಇಂಡೀಸ್- ಶ್ರೀಲಂಕಾ ಮೊದಲ ಏಕದಿನ ಇಂದುಶಾಸಕ ಹಂಪನಗೌಡ ಬಾದರ್ಲಿ ಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ!ಕಾಗವಾಡ  ತಾಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ:ಎರಡು ಜನ ಸ್ಥಳದಲ್ಲಿ ಸಾವು..! ಓರ್ವ ಗಂಭೀರ...ಜಮೀನು ವಿವಾದಕ್ಕೆ ವ್ಯಕ್ತಿ ಓರ್ವನ ಮೇಲೆ ಮರಣಾಂತಿಕ ಹಲ್ಲೆ  ಕ್ರಿಕೆಟ್: ಪಾಕ್ ವಿರುದ್ಧ ಕಾಂಗರೂಗೆ ೪೬ ರನ್‌ಗಳ ಗೆಲುವುಭಾರತ ವಿರುದ್ಧ ಚುಟುಕು ಸರಣಿ ಗೆದ್ದ ಇಂಗ್ಲೆAಡ್ಇಂದು ಸಂಜೆ 4.05ಕ್ಕೆ ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪಟ್ಟಾಭಿಷೇಕ