Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಅಧಿಕಾರದ ಅವಧಿಯಲ್ಲಿಯೂ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖ : ವಿಜಯಪುರ ಡಿಸಿ 

Advertisement
ವಿಜಯಪುರ : ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ.

ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ.

ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ.


ವಕ್ಫ್​​ ಆಸ್ತಿಗಳ ಇಂದೀಕರಣ ಮೊದಲಿನಿಂದಲೂ ಮಾಡುತ್ತ ಬಂದಿದ್ದಾರೆ. ಹಿಂದಿನಂತೆಯೆ ಈಗ ನಾವು ಇಂದೀಕರಣ ಮಾಡಿದ್ದೇವೆ ಎಂದು ಬಿಜೆಪಿ ಟೀಂ ಎದುರು ಡಿಸಿ ಸ್ಪಷ್ಟನೆ ನೀಡಿದರು. 2018-19ರಲ್ಲೂ ವಕ್ಫ್ 123 ಆಸ್ತಿಗಳ ಇಂದೀಕರಣ ಆಗಿವೆ.


112 ರೈತರ ಜಮೀನುಗಳಿಗೆ ನೋಟಿಸ್ ನೀಡಲಾಗಿದೆ. ಪ್ರತಿವರ್ಷ ಇಂದೀಕರಣ, ನೋಟಿಸ್ ಪ್ರಕ್ರಿಯೆ ಆಗುತ್ತಿದೆ. 2020-21ರಲ್ಲಿ 138 ರೈತರಿಗೆ ನೋಟಿಸ್ ನೀಡದೇ ಇಂದೀಕರಣ ವಕ್ಫ್​​ ಹೆಸರು ಸೇರ್ಪಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ.


ಅದೇ ರೀತಿಯಾಗಿ 2020-21ರಲ್ಲೂ ನೋಟಿಸ್ ನೀಡದೆ ಸಾಕಷ್ಟು ರೈತರ ಜಮೀನು ಪಹಣಿಯಲ್ಲಿ ವಕ್ಫ್​ ಹೆಸರು ಉಲ್ಲೇಖಿಸಿದ್ದು, ಇದು ಕಾನೂನು ಪ್ರಕ್ರಿಯೆ. ಇನ್ಮುಂದೆ ನೋಟಿಸ್ ಇಲ್ಲ, ಕಾಲಂ 11 ಹೆಸರು ಸೇರ್ಪಡೆ ಮಾಡಲ್ಲ. ಈಗ ಮಾಡಿರೋದನ್ನ ವಾಪಸ್ ಪಡೆಯುತ್ತೇವೆ, ಆದರೆ ಈ ಹಿಂದೆ ಆಗಿರುವ ಮ್ಯೂಟೇಷನ್ ಕುರಿತು ಸರ್ಕಾರದಿಂದ ಸಲಹೆ ಪಡೆದು ಮುಂದಿನ ಕಾರ್ಯ ಕೈಗೊಳ್ಳುತ್ತೇವೆ ಎಂದಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ