
ಇದರಿಂದ ಪ್ರತಿವರ್ಷವೂ ಈ ಸಮಸ್ಯೆ ಜ್ವಲಂತ ಸಮಸ್ಯೆಯಾಗಿ ಮಾರ್ಪಟ್ಟಿದೆ. ಆದ್ದರಿಂದ ಮೊನ್ನೆ ಕಣಕುಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು ಒಟ್ಟಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಭೇಟಿ ಮಾಡಿ ಈ ಸಮಸ್ಯೆಯ ಬಗ್ಗೆ ಹೇಳಿಕೊಂಡರು.
ಸದರಿ ಈ ವಿಷಯದ ಬಗ್ಗೆ ಸಮಗ್ರವಾಗಿ ವರದಿ ಮಾಡಿ ಹೆಸ್ಕಾಂ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಗಮನಕ್ಕೆ ತೆಗೆದುಕೊಂಡು ಬಂದು ಅಭಿಪ್ರಾಯ ಸಂಗ್ರಹಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಭಾಗಕ್ಕೆ ವಿದ್ಯುತ್ ಸೌಲಭ್ಯ ಸಮರ್ಪಕವಾಗಿ ದೊರಕುವುದೇ ಎಂಬುದನ್ನು ಕಾದುನೋಡಬೇಕಿದೆ.
ವರದಿ:- ಬಸವರಾಜು

