Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಟಿ ಇ ಅಡಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ 

Advertisement
ಬೆಂಗಳೂರು: 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಜೂನ್ 6ರಿಂದ ಶಾಲೆಗಳಲ್ಲಿ ಆರ್.ಟಿ.ಇ. ಅಡಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು.

ಅರ್ಜಿ ಸಲ್ಲಿಸಲು ಏಪ್ರಿಲ್ 22 ರವರೆಗೆ ಅವಕಾಶ ನೀಡಲಾಗಿತ್ತು.ಈ ಕುರಿತಾದ ಮನವಿ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.

ಮೇ 30ರವರೆಗೆ ವಿಶೇಷ ಪ್ರವರ್ಗಗಳು ಮತ್ತು ಅರ್ಜಿಗಳ ಪರಿಶೀಲನೆ ನಡೆಸಲಿದ್ದು, ಪಟ್ಟಿ ಅಂತಿಮಗೊಳಿಸಿದ ನಂತರ ಜೂನ್ 1ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು.

ಜೂನ್ 5 ರಂದು ಆನ್ಲೈನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಿದೆ. ಶಾಲೆಗಳಲ್ಲಿ ಆರ್‌ಟಿಇ ಅಡಿ ವಿದ್ಯಾರ್ಥಿಗಳ ದಾಖಲಾತಿ ಆರಂಭವಾಗಲಿದೆ. ಜೂನ್ 6ರಿಂದ ವಿದ್ಯಾರ್ಥಿಗಳ ದಾಖಲಾತಿ ನಡೆಯಲಿದೆ.

ಜೂ. 6ರಿಂದ 14ರವರೆಗೆ ಶಾಲೆಗಳಲ್ಲಿ ಮೊದಲ ಸುತ್ತಿನಡಿ ಶಾಲೆಗಳಲ್ಲಿ ದಾಖಲಾದ ಮಕ್ಕಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲಾಗುವುದು.

ಜೂ. 19ರಂದು ಆನ್ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ನಡೆಸಲಿದ್ದು, ಜೂನ್ 20ರಿಂದ 27ರವರೆಗೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಲ್ಲಿ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುವುದು. ಜೂನ್ 20ರವರೆಗೆ ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅಳವಡಿಸಲಾಗುವುದು ಎಂದು ಹೇಳಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್