Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

Advertisement
ಬೆಂಗಳೂರು : ಮಠ, ಎದ್ದೇಳು ಮಂಜುನಾಥ ಮುಂತಾದ ಚಿತ್ರಗಳ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಇದುವರೆಗೂ ತಿಳಿದು ಬಂದಿಲ್ಲ.

ಇತ್ತೀಚಿಗಷ್ಟೇ ಸಾಲಗಾರರ ಕಾಟದಿಂದ ಬೇಸತ್ತಿದ್ದ ಗುರುಪ್ರಸಾದ ಅವರ ಕಿರುಕುಳದಿಂದ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಬೇಸತ್ತು ನಗರದ ಹೊರವಲಯದಲ್ಲಿ ಫ್ಲಾಟ್‌ ಖರೀದಿಸಿ ಅಲ್ಲಿ ವಾಸವಾಗಿದ್ದರು. ಅವರ ಇತ್ತೀಚಿನ ರಂಗನಾಯಕ ಸಿನಿಮಾ ದಯನೀಯವಾಗಿ ಸೋತಿತ್ತು. ಇದರಿಂದ ಅವರು ವಿಪರೀತವಾಗಿ ನೊಂದಿದ್ದರು.

ಕನಕಪುರದಲ್ಲಿ ಜನಿಸಿದ್ದ ಗುರುಪ್ರಸಾದ್‌ ಟಿ.ಎನ್‌. ಸೀತಾರಾಂ ಅವರ ಗರಡಿಯಲ್ಲಿ ಪಳಗಿದ್ದರು. ಮಠ ಚಿತ್ರ ಅವರನ್ನು ಕನ್ನಡದ ಚಿತ್ರರಂಗದಲ್ಲೇ ಖ್ಯಾತರನ್ನಾಗಿ ಮಾಡಿತ್ತು.

ಅಷ್ಟೇ ಅಲ್ಲದೇ ಅವರಿಗೆ ಅತ್ಯುತ್ತಮ ಚಿತ್ರ ಸಾಹಿತಿ ಪ್ರಶಸ್ತಿಯನ್ನೂ ಸಹ ತಂದುಕೊಟ್ಟಿತ್ತು. ಎದ್ದೇಳು ಮಂಜುನಾಥ, ಡೈರೆಕ್ಟರ್‌ ಸ್ಪೆಷಲ್‌ ಮತ್ತಿತರ ಚಿತ್ರಗಳನ್ನು ನಿರ್ದೇಶಿಸಿದ್ದ ಗುರುಪ್ರಸಾದ್‌ ತಮ್ಮ ಮುಂಗೋಪದಿಂದಾಗಿ ನಿಷ್ಟುರವಾದಿ ಎಂದು ಹೆಸರನ್ನೂ ಗಳಿಸಿದ್ದರು.

ನಟ ಜಗ್ಗೇಶ್‌ ಅವರೊಂದಿಗೆ ಜಗಳ, ನಟ ಡಾಲಿ ಧನಂಜಯ್‌ ಜೊತೆಗಿನ ವಿವಾದ, ಮೀಟೂ ವಿವಾದದಲ್ಲಿ ಅವರು ನೀಡಿದ್ದ ಹೇಳಿಕೆ, ಅವರ ದಾಂಪತ್ಯ ಕಲಹ ಹಾಗೂ ಹಣದ ವಿಷಯದಲ್ಲಿ ಅವರು ಕೆಲವರೊಂದಿಗೆ ಮಾಡಿಕೊಂಡಿದ್ದ ಜಗಳಗಳು ಅವರನ್ನು ವಿವಾದಾಸ್ಪದ ನಿರ್ದೇಶಕರ ಪಟ್ಟಿಗೆ ಸೇರಿಸಿದ್ದವು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ