LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾವೈಕ್ಯತೆ ಮೆರೆಯುವ ಹಬ್ಬ ಮೊಹರಂ ಆಚರಣೆ

Advertisement
ಮಲ್ಲಮ್ಮನ ಬೆಳವಡಿ : ಮೊಹರಂ ಹಬ್ಬ ಬಂತೆಂದರೆ ಸಾಕು ಕೇವಲ ಮುಸಲ್ಮಾನರು ಮಾತ್ರವಲ್ಲದೆ ಹಿಂದೂ ಜನರು ಸೇರಿಕೊಂಡು ಭಾವೈಕ್ಯತೆ ಮೆರೆಯುವ ಹಬ್ಬ ಮೊಹರಂ ಹಬ್ಬ. ಇನ್ನು ಮೊಹರಂ ಹಬ್ಬವನ್ನು ಗ್ರಾಮೀಣ ಪ್ರದೇಶಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಹಿಂದೂ-ಮುಸಲ್ಮಾನರು ಎಲ್ಲರೂ ಒಟ್ಟಿಗೆ ಸೇರಿಕೊಂಡು ಈ ಹಬ್ಬವನ್ನು ಆಚರಿಸುತ್ತಾರೆ.



ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕು ಸಿದ್ದಸಮುದ್ರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಮೊಹರಂ ಹಬ್ಬವನ್ನು ಹಿಂದೂ-ಮುಸಲ್ಮಾನರೆಲ್ಲರೂ ಸೇರಿಕೊಂಡು ಅತಿ ವಿಜೃಂಭಣೆಯಿಂದ ಆಚರಿಸಿದ್ದಾರೆ. ಮೋರಂ ಹಬ್ಬದಲ್ಲಿ ಯುವಕರಿಗಂತು ಎಲ್ಲಿಲ್ಲದ ಸಡಗರ ಸಂಭ್ರಮ. ಹೌದು, ಯುವಕರು ಕಾಲಿಗೆ ಗೆಜ್ಜೆ ಕಟ್ಟಿ, ತಲೆಗೆ ರಿಬ್ಬನ್ ಕಟ್ಟಿ ಕೋಲಾಟ ಆಡುವುದಂತೂ ಬಲುರೋಚಕ. ಅದರಂತೆ ಊರಿನ ಹಿರಿಯರು ಕೂಡ ಜನಪದ ಮತ್ತಿತರ ಹಾಡುಗಳನ್ನು ಹೇಳುತ್ತಾ ಈ ಹಬ್ಬವನ್ನು ಆಚರಿಸುವುದು ರೂಢಿಯಲ್ಲಿದೆ.
ಇದನ್ನು ಜಾನಪದ ಕಲೆಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ. ಹಳ್ಳಿಗಳಲ್ಲಿ ಈ ಕುಣಿತಕ್ಕೆ ಅಲಾಯಿ ಹೆಜ್ಜೆ ಕುಣಿತ ಎಂದು ಕರೆಯಲಾಗುತ್ತದೆ.

ಇನ್ನು ಹರಕೆ ಹೊತ್ತ ಹಿಂದೂ- ಮುಸ್ಲಿಮರು ಹುಲಿ ವೇಷ, ಹಾಕಿ ಕುಣಿದು ಕುಪ್ಪಳಿಸುತ್ತಾರೆ.ಗ್ರಾಮದ ಜನರು ಎರಡು ಡೋಲಿಗಳಿಗೆ ಸಕ್ಕರೆ ನೈವಿದ್ಯ ನೀಡಿ ಭಕ್ತಿಯಿಂದ ಬೇಡಿಕೊಳ್ಳುತ್ತಾರೆ.

ವರದಿ: ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ