LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಲೋಕಾರ್ಪಣೆಗೆ ಸಿದ್ದವಾದ ಯಳಂದೂರಿನ ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ದೇವಸ್ಥಾನ

Advertisement
ಯಳಂದೂರು: ಚಾಮರಾಜನಗರ ಜಿಲ್ಲೆಯ ಯಳಂದೂರು ಪಟ್ಟಣದ ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸೇವಾ ಸಮತಿ ವತಿಯಿಂದ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಶಶಿಕಲಾ ರಮೇಶ್ ರವರ ಅದ್ಯಕ್ಷತೆಯಲ್ಲಿ ಪೂರ್ವಸಭೆಯನ್ನು ಹಮ್ಮಿಕೊಳ್ಳಲಾಯಿತು.



ಸಭೆಯಲ್ಲಿ ಸರ್ವಸದಸ್ಯರ ಸಮ್ಮುಖದಲ್ಲಿ ಪ್ರಮುಖ ವಿಷಯಗಳಾದ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಶ್ರೀ ಭೂ ಲಕ್ಷ್ಮೀ ವರಹ ಸ್ವಾಮಿ ದೇವಸ್ಥಾನದ ಲೋಕಾರ್ಪಣೆಗೆ ಆಗಸ್ಟ್ 09, 10,11 ನೇ ತಾರೀಕನ್ನು ಗೊತ್ತುಪಡಿಸಲಾಯಿತು.ನಂತರ ಪೂಜೆ ವಿಧಿವಿಧಾನಗಳು, ಅನ್ನಸಂತರ್ಪಣೆ, ವೇದಿಕೆ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.ನಂತರ ಮುಖಂಡರು ಕಾರ್ಯಕ್ರಮ ಯಶಸ್ವಿಗೆ ಸಲಹೆ ಸೂಚನೆಗಳನ್ನು ನೀಡಿದರು.ಗಣ್ಯರಿಗೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಲಾಯಿತು.ಪೂರ್ವಭಾವಿ ಸಭೆ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಎಲ್ಲಾರಿಗೂ ಸಮಿತಿ ವತಿಯಿಂದ ವಂದನೆ ಸಲ್ಲಿಸಿಸಲಾಯಿತು. ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿಯಾಗಲು ಸರ್ವಜನಿಕರೆಲ್ಲರೂ ಸಹಕರಿಸಿ ಎಂದು ಸೇವಾ ಸಮಿತಿಯಿಂದ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶ್ರೀ ಭೂ ಲಕ್ಷ್ಮೀ ವರಹಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷರು, ಗೌರವ ಅಧ್ಯಕ್ಷರು, ಸಲಹಗಾರರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಭಾಗವಹಿಸಿದರು.

ವರದಿ:  ಸ್ವಾಮಿ ಬಳೇಪೇಟೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ