Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಪ್ರಿಲ್ 9ರ ನಂತರ ಒಳಮೀಸಲಾತಿ ಅಂತಿಮ ತೀರ್ಮಾನ : ಕೆ. ಎಚ್ ಮುನಿಯಪ್ಪ

Advertisement

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಹಾಗೂ 56 ಸಾವಿರ ಹುದ್ದೆಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ. ಎಚ್. ಮುನಿಯಪ್ಪ ಮಹತ್ವದ ಮಾಹಿತಿ ನೀಡಿದ್ದಾರೆ.


ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಏಪ್ರಿಲ್ 9ರ ನಂತರ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.


ಈ ಬಗ್ಗೆ ಮಾತನಾಡಿ, ಒಳಮೀಸಲಾತಿ ವಿಚಾರವಾಗಿ ಇಂದು ಸುದೀರ್ಘ ಚರ್ಚೆ ನಡೆಸಿದ್ದೇವೆ. 101 ಉಪಜಾತಿಗಳ ಹೋರಾಟ ಸಮಿತಿಗಳು ವಿನಾಕಾರಣ ಗೊಂದಲ ಮಾಡಿಕೊಳ್ಳಬಾರದು ಅಥವಾ ಪ್ರತಿಭಟನೆಗೆ ಮುಂದಾಗಬಾರದು.


ಒಳಮೀಸಲಾತಿ ಜಾರಿಗೆ ಸರ್ಕಾರ ಈಗಾಗಲೇ ಬದ್ಧವಾಗಿದೆ. ಭೋವಿ, ಲಂಬಾಣಿ, ಕೊರಮ, ಕೊರಚ ಸೇರಿದಂತೆ ಎಡಗೈ ಮತ್ತು ಬಲಗೈ ಸಮುದಾಯದ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.


56 ಸಾವಿರ ಹುದ್ದೆಗಳ ನೇಮಕಾತಿ ಮತ್ತು ರೋಸ್ಟರ್ ಗೊಂದಲ


ಸರ್ಕಾರಿ ಇಲಾಖೆಗಳಲ್ಲಿನ 56 ಸಾವಿರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಸಣ್ಣಪುಟ್ಟ ಗೊಂದಲಗಳಿರುವುದು ನಿಜ. ಈ ಬಗ್ಗೆ ಸಚಿವರಾದ ಹೆಚ್. ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ ಮತ್ತು ಆರ್. ಬಿ. ತಿಮ್ಮಾಪುರ ಅವರೊಂದಿಗೆ ಚರ್ಚಿಸಲಾಗಿದೆ.


ವಿಶೇಷವಾಗಿ ರೋಸ್ಟರ್ ಪದ್ಧತಿಯಲ್ಲಿ ಎಲ್ಲಾ ಹುದ್ದೆಗಳು ಕೇವಲ ಒಂದು ಅಥವಾ ಇಬ್ಬರಿಗೆ ಹೋಗುತ್ತವೆ ಎಂಬ ಆತಂಕ ಸಮುದಾಯಗಳಲ್ಲಿದೆ.


ಈ ತಾಂತ್ರಿಕ ಗೊಂದಲ ನಿವಾರಿಸಲು 'ತಜ್ಞರ ಸಮಿತಿ' ರಚಿಸಲು ತೀರ್ಮಾನಿಸಲಾಗಿದೆ. ಏಪ್ರಿಲ್ 9ರ ನಂತರ ನಡೆಯುವ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಹೊರಬೀಳಲಿದೆ.


ಹಾವನೂರು ಆಯೋಗ ಹಾಗೂ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ವರದಿಗಳಲ್ಲಿ ಜನಸಂಖ್ಯೆಯ ಅನುಪಾತ ಒಂದೇ ರೀತಿಯಲ್ಲಿದೆ. ಪ್ರಸ್ತುತ ಇರುವ ಶೇ. 17ರಷ್ಟು ಮೀಸಲಾತಿಯನ್ನು ಶೇ. 15ಕ್ಕೆ ಸೀಮಿತಗೊಳಿಸಿ ಸಮಾನವಾಗಿ ಹಂಚಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆದಿದೆ.


ವೈಜ್ಞಾನಿಕವಾಗಿ ಮೀಸಲಾತಿ ಹಂಚಿಕೆಯಾಗುವುದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಮುನಿಯಪ್ಪ ಸ್ಪಷ್ಟಪಡಿಸಿದರು.


ಒಟ್ಟಾರೆಯಾಗಿ, ನೀತಿ ಸಂಹಿತೆ ಮುಗಿಯುತ್ತಿದ್ದಂತೆಯೇ ಒಳಮೀಸಲಾತಿ ಪ್ರಕ್ರಿಯೆಗೆ ವೇಗ ಸಿಗಲಿದ್ದು, ತಜ್ಞರ ಸಮಿತಿಯ ವರದಿ ಆಧರಿಸಿ ಸರ್ಕಾರ ಮುಂದಿನ ಹೆಜ್ಜೆ ಇಡಲಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ