Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀನನ್ನು ಬೇರೆಯವರಿಗೆ ಪರಭಾರೆ ಮಾಡಿದ ಆರೋಪ : ತಹಶೀಲ್ದಾರ್ ಸೇರಿ ನಾಲ್ವರ ಮೇಲೆ ಎಫ್‌ಐಆರ್

Advertisement
ಬೆಳಗಾವಿ : ಜಮೀನನ್ನು ಅಕ್ರಮವಾಗಿ ಬೇರೆಯವರಿಗೆ ಪರಭಾರೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಹಶೀಲ್ದಾರ್ ಮೋಹನ ಭಸ್ಮೆ ವಿರುದ್ಧ FIR ದಾಖಲಾಗಿದೆ.

ಗೋಕಾಕ್ ತಾಲೂಕಿನ ಮಮದಾಪುರ ಗ್ರಾಮದ ಸಂಗೀತ ಬನ್ನೂರ್ ಎನ್ನುವವರಿಗೆ ಸೇರಿದ 4 ಎಕರೆ ಜಮೀನಲ್ಲಿ 20 ಗುಂಟೆ ಭೂಮಿಯನ್ನು ಗುಲಾಬ್ ಓಸ್ವಾಲ್ ಎನ್ನುವ ಆರೋಪಿಗೆ ಪರಭಾರೆ ಮಾಡಿದ ಆರೋಪ ಕೇಳಿ ಬಂದಿದೆ.


ಸಂಗೀತ ಬನ್ನೂರು ಎಂಬವರಿಗೆ ಸೇರಿದ 20 ಗುಂಟೆ ಜಾಗವನ್ನು ತಹಸಿಲ್ದಾರ್ ಪರಭಾರೆ ಮಾಡಿದ್ದಾರೆ. ಮಮದಾಪುರ ಗ್ರಾಮದಲ್ಲಿ ಸಂಗೀತ ಬನ್ನೂರು ಎಂಬವರಿಗೆ 20 ಗುಂಟೆ ಜಮೀನು ಸೇರಿತ್ತು.


 ಸರ್ವೇ ನಂಬರ್ 122/1 (1) 4 ಎಕರೆ ಪೈಕಿ 20 ಗುಂಟೆ ಜಾಗ ಪರಭಾರೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗ್ರಾಮದಲ್ಲಿ ಅಧಿಕಾರಿಗಳು ಗುಲಾಬ್‌ ಓಸ್ವಾಲ್ ನೀಡಿದ ಆಮಿಷಕ್ಕೆ ಒಳಗಾಗಿ ಪರಭಾರೆ ಮಾಡಿದ್ದಾರೆ.


ಪ್ರಕರಣ A1 ಆರೋಪಿ ಗುಲಾಬ್ ಓಸ್ವಾಲ್ ಹೆಸರಿಗೆ ಜಮೀನು ಪರಭಾರೆ ಮಾಡಲಾಗಿದೆ. ಗೋಕಾಕ್ ತಾಸಿಲ್ದಾರ್ ಮೋಹನ್ ಭಸ್ಮೆ A2 ಆರೋಪಿಯಾಗಿದ್ದಾರೆ.

ಅದೇ ರೀತಿ A3 ಕಂದಾಯ ನಿರೀಕ್ಷಕ ಎಸ್ ಎಂ ಹಿರೇಮಠ್, A4 ಗ್ರಾಮ ಲೆಕ್ಕಾಧಿಕಾರಿ ತುಕಾರಾಂ ಪಮ್ಮಾರ್, A5 ಲ್ಯಾಂಡ್ ಸರ್ವೆಯರ್ ಸಿ. ತಿಮ್ಮಯ್ಯ ಮೇಲೆ ಇದೀಗ ಕೇಸ್ ದಾಖಲಾಗಿದೆ. ಮಾರ್ಚ್ 26ರಂದು ಬೆಳಗಾವಿ ಜಿಲ್ಲೆಯ ಗೋಕಾಕ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಮದಾಪುರ ಗ್ರಾಮದ ಸಂಗೀತ ಬನ್ನೂರು ನೀಡಿದ ದೂರಿನ ಮೇರೆಗೆ ಇದೀಗ ತಹಶೀಲ್ದಾರ ಸೇರಿದಂತೆ ಐವರ ವಿರುದ್ಧ FIR ದಾಖಲಾಗಿದೆ. ಗೋಕಾಕ್ ದಿವಾನಿ ನ್ಯಾಯಾಲಯದ ಆದೇಶದ ಮೇರೆಗೆ ದೂರು ದಾಖಲಾಗಿದೆ. ಐಪಿಸಿ 1860ರಡಿ ಸೆಕ್ಷನ್ 409, 418, 420, 423, 427, 466, 468, 149ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ