Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲು 

Advertisement
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.

ಈ ನಡುವೆ ತನಗೆ ಜೀವ ಬೆದರಿಕೆ ಹಾಕಿ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಸಂತ್ರಸ್ತೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.ಈ ದೂರು ಆಧರಿಸಿ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತೆಯು ಶನಿವಾರ ಮಧ್ಯಾಹ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಂತ್ರಸ್ತೆಯ ದೂರು ಆಧರಿಸಿ ಸೂಕ್ತ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಶಿಫಾರಸು ಮಾಡಿದ್ದರು.

ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್‌ನಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಕುರಿತು ತಿಳಿಸಿರುತ್ತಾರೆ.

ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ. ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ಡ್ರೈವ್‌ಗಳು ಈಗ ಜನ ಸಾಮಾನ್ಯರ ಕೈಗೆ ಸಿಕ್ಕಿ, ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದ್ದು, ಮಹಿಳೆಯರ ಬದುಕು ಹಾಗೂ ಘನತೆಯನ್ನು ನಾಶ ಮಾಡುತ್ತಿರುವುದಾಗಿ, ಈ ಕೃಷ್ಣಕ್ಕೆ ಕಾರಣರಾಗಿರುವವರ ವಿರುದ್ಧ ಸೂಕ್ತ ಪೊಲೀಸ್ ತನಿಖೆಯನ್ನು ನಡೆಸುವಂತೆ ಆಯೋಗದಲ್ಲಿ ಸಲ್ಲಿಸಿರುವ ಮನವಿಯಲ್ಲಿ ಕೋರಿದ್ದರು.

ಹಾಸನ ಜಿಲ್ಲೆಯಲ್ಲಿ ಪೆನ್‌ ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯಪಡಿಸುವ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗುತ್ತಿದ್ದು, ಚಿತ್ರೀಕರಣ ಮಾಡಿದ ವ್ಯಕ್ತಿ ಮತ್ತು ಅದನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಮಾನಹಾನಿ ಉಂಟು ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಮತ್ತು ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿರುವವರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ಈ ಬೆನ್ನಲ್ಲೇ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವೀಡಿಯೋ ಪ್ರಕರಣವನ್ನು ಸಿಐಡಿಯ ಎಸ್‌ಐಟಿ ತನಿಖೆಗೆ ವಹಿಸಿ ಅಧಿಕೃತ ಆದೇಶ ಹೊರಡಿಸಲಾಗಿತ್ತು.

ಈ ನಡುವೆ ಸಂತ್ರಸ್ತ ಮಹಿಳೆಯ ದೂರಿನ ಹಿನ್ನಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354ಎ, 354ಡಿ, 506, 509ರಡಿಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ