Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ರಾಜಸ್ತಾನ ರಾಯಲ್ಸ್ ಗೆ ಮೊದಲ ಗೆಲುವು

Advertisement
ಮುಂಬೈ: ರಾಜಸ್ತಾನ ರಾಯಲ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಹನ್ನೊಂದನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 6 ರನ್ ಗಳ ವೀರೋಚಿತ ಗೆಲುವಿನೊಂದಿಗೆ ಪಂದ್ಯಾವಳಿಯಲ್ಲಿ ತನ್ನ ಅಂಕ ಪಟ್ಟಿಯ ಖಾತೆಯನ್ನು ತೆರೆಯಿತು.

ಮೊದಲು ಬ್ಯಾಟ್ ಮಾಡಿದ ರಾಜಸ್ತಾನ ರಾಯಲ್ಸ್ ನಿಗದಿತ 20 ಓವರುಗಳಲ್ಲಿ 9 ವಿಕೆಟ್ ಗೆ 182 ರನ್ ಗಳಿಸಿತು. 183 ರನ್ ಗಳ ಗೆಲುವಿನ ಗುರಿಯೊಂದಿಗೆ ಕಣಕ್ಕೆ ಇಳಿದ ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್ ಗೆ 176 ರನ್ ಗಳಿಸಲು ಮಾತ್ರ ಸಾಧ್ಯವಾಗಿ 6 ರನ್ ಗಳ ವಿರೋಚಿತ ಸೋಲು ಕಂಡಿತು. ಕೊನೆಯಲ್ಲಿ ಹಿರಿಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೆಜಾ ಗೆಲುವು ಸಂಪಾದಿಸಲು ಮಾಡಿದ ಉತ್ತಮ ಯತ್ನ ಫಲ ಕೊಡಲಿಲ್ಲ.

ಇದಕ್ಕೆ ಮುನ್ನ ಬ್ಯಾಟ್ ಮಾಡಿದ ರಾಜಸ್ತಾನ ರಾಯಲ್ಸ್ ಪರವಾಗಿ ನಿತೀಶ ರಾಣಾ ಅಕ್ಷರಸ ರನ್ ಸುರಿಮಳೆ ಗೈದರು. ಕೇವಲ 36 ಎಸೆತಗಳಲ್ಲಿ 10 ಬೌಂಡರಿ 5 ಸಿಕ್ಸರ್ ನೆರವಿನಿಂದ 81 ರನ್ ಗಳಿಸಿದರು. ಅವರ ಅತ್ಯಾಕರ್ಷಕ ಆಟದ ಫಲವಾಗಿ ರಾಜಸ್ತಾನ ರಾಯಲ್ಸ್ ಉತ್ತಮ ಮೊತ್ತ ಕಲೆ ಹಾಕಿತು.

ನಾಯಕ ರಿಯಾನ್ ಪರಾಗ್ 27 ಎಸೆಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿದರು. ಚೆನ್ನೈ ಪರ ನೂರ ಅಹ್ಮದ 28 ಕ್ಕೆ 2 ವಿಕೆಟ್ ಕಬಳಿಸಿದರು.

ಸ್ಕೋರ್ ವಿವರ:

ರಾಜಸ್ತಾನ ರಾಯಲ್ಸ್ 20 ಓವರುಗಳಲ್ಲಿ 9 ವಿಕೆಟ್ ಗೆ 182

ಚೆನ್ನೈ ಸೂಪರ್ ಕಿಂಗ್ಸ್ 6 ವಿಕೆಟ್ ಗೆ 176

ಋತುರಾಜ ಗಾಯಕ್ವಾಡ 63, 44 ಎಸೆತ, 7 ಬೌಂಡರಿ, 1 ಸಿಕ್ಸರ್

ವಾನಿಂದು ಹಸರಂಗ 35 ಕ್ಕೆ 4, ಪಂದ್ಯ ಶ್ರೇಷ್ಠ:  ನಿತೀಶ ರಾಣಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ