Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮರ್ಪಕ ಬರಪರಿಹಾರ ಅನುದಾನ ಹಂಚಿಕೆಗೆ ಅನ್ನದಾತರ ಆಗ್ರಹ

Advertisement
ಸಿರುಗುಪ್ಪ : -ನಗರದ ತಾಲೂಕು ಕಛೇರಿಯಲ್ಲಿ ತಾಳೂರು ಗ್ರಾಮದ ರೈತರು ಬರಪರಿಹಾರ ಅನುದಾನವನ್ನು ಸಮರ್ಪಕವಾಗಿ ಹಂಚುವಂತೆ ಆಗ್ರಹಿಸಿ ತಹಶೀಲ್ದಾರರಿಗೆ ಶಿರಸ್ತೆದಾರ ಸಿದ್ದಾರ್ಥ್ ಅವರ ಮೂಲಕ ಮನವಿ ಸಲ್ಲಿಸಿದರು.



ರೈತ ಮುಖಂಡರಾದ ರಾಘವೇಂದ್ರರೆಡ್ಡಿ ಮಾತನಾಡಿ 2023-24ನೇ ಸಾಲಿನ ಮುಂಗಾರು ಬರ ಪರಿಹಾರವು ಕರೂರು ಹೋಬಳಿ ವ್ಯಾಪ್ತಿಯ ತಾಳೂರು ಗ್ರಾಮದ ರೈತರ ಖಾತೆಗಳಿಗೆ ಸಮರ್ಪಕ ಹಂಚಿಕೆಯಾಗಿಲ್ಲ.

ಎನ್.ಡಿ.ಆರ್.ಎಫ್ ಹಾಗೂ ಎಸ್.ಡಿ.ಆರ್.ಎಫ್‌ನ ನಿಯಮಗಳನ್ನು ಉಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಇದು ಬೆಳೆ ಸಮೀಕ್ಷೆಯ ವಿಫಲಕ್ಕೆ ಸಾಕ್ಷಿಯೆಂದು ಹೇಳಬಹುದಾಗಿದೆ. ಈಗಾಗಲೇ ಸರ್ಕಾರದಿಂದ ಬರ ಪರಿಹಾರ ಅನುದಾನವು 808 ರೈತರ ಖಾತೆಗಳಿಗೆ ಹಂಚಿಕೆಯಾಗಿವೆ.

ಆದರೆ ಇನ್ನುಳಿದ ರೈತರ ಖಾತೆಗಳಿಗೆ ಹಂಚಿಕೆಯಾಗದಿರುವ ಕಾರಣ ಕೇಳಿ ಮೇ.9ರಂದು ಮನವಿ ಸಲ್ಲಿಸಲಾಗಿತ್ತು. ಇದುವರೆಗೂ ಯಾವುದೇ ರೀತಿಯ ಮಾಹಿತಿ ನಮಗೆ ದೊರೆಕಿರುವುದಿಲ್ಲ.

ಅಲ್ಲದೇ ಬೇಕಾಬಿಟ್ಟಿಯಾಗಿ ಬೆಳೆ ಸಮೀಕ್ಷೆ ನಡೆಸಿ ತಮಗೆ ಬೇಕಾದವರಿಗೆ ಪರಿಹಾರ ನೀಡುತ್ತಿರುವ ಬಗ್ಗೆ ಮುಂದಿನ ದಿನಗಳಲ್ಲಿ ಕಾನೂನಾತ್ಮಕ ಹೋರಾಟ ನಡೆಸಲಾಗುವುದು.ಈ ವಿಷಯದ ಬಗ್ಗೆ ಸಂಬಂದಿಸಿದ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳನ್ನು ವಿಚಾರಿಸಿದ್ದು ಸೂಕ್ತ ಮಾಹಿತಿ ದೊರೆಯುತ್ತಿಲ್ಲ

ಆದ್ದರಿಂದ ಸಭೆಯಲ್ಲಿ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಉಳಿದ ಎಲ್ಲಾ ರೈತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.ಇದೇ ವೇಳೆ ರೈತರಾದ ಜಿ.ಮಲ್ಲಿಕಾರ್ಜುನರೆಡ್ಡಿ, ಬಿ.ಮಹಾನಂದರೆಡ್ಡಿ, ಕೆ.ಸುದಾಕರ, ಬಿ.ವೀರಭದ್ರರೆಡ್ಡಿ, ಟಿ.ಮದುಸೂಧನಗೌಡ, ಲಕ್ಷ್ಮಣ, ಇನ್ನಿತರರಿದ್ದರು.

ವರದಿ ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ