Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

10 ತಿಂಗಳ ತರಬೇತಿ ಪಡೆದವರನ್ನೂ ಪರಿಗಣಿಸಲು ಒತ್ತಾಯ

Advertisement
-----------------------------------------------ತೋಟಗಾರಿಕೆ ಇಲಾಖೆ ಹುದ್ದೆಗಳ ಭರ್ತಿ

ಇಂಡಿ: ತೋಟಗಾರಿಕೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರಕಾರ ಹೊರಡಿಸಿದ ಹೊಸ ನಿಯಮದಿಂದಾಗಿ ಇಲಾಖೆಯ 10 ತಿಂಗಳ ತರಬೇತಿ ಪಡೆದ ರೈತರ ಮಕ್ಕಳಿಗೆ ಅನ್ಯಾಯವಾಗಿದ್ದು, ಸರಕಾರ ನಿಯಮವನ್ನು ಸಡಿಲಿಸಿ ತರಬೇತಿ ಪಡೆದ ರೈತರ ಮಕ್ಕಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ತರಬೇತಿ ಪಡೆದ ರೈತರ ಮಕ್ಕಳು ತೋಟಗಾರಿಕೆ ಇಲಾಖೆ ನಿರ್ಧೇಶಕರಿಗೆ ಮನವಿ ಮಾಡಿದರು.

https://youtu.be/Y_SsRbJcqZo

ಇಂಡಿ ಶಾಸಕ ಯಶವಂತರಾಯಗೌಡ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ನಾಯಕ ಚೆಲುವಾದಿ ನಾರಾಯಣಸ್ವಾಮಿ ಅವರಿಗೂ ಹಾಗೂ ತೋಟಗಾರಿಕೆ ಇಲಾಖೆಯ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ ಅವರಿಗೂ ಮನವಿ ಸಲ್ಲಿಸಲಾಯಿತು. ಸರಕಾರದ ಮೊದಲಿನ ನಿಯಮದ ಪ್ರಕಾರ ತೋಟಗಾರಿಕೆ ಇಲಾಖೆಯಲ್ಲಿ ತೋಟಗಾರಿಕೆ ಸಹಾಯಕ ಹುದ್ದೆಗಳ ಭರ್ತಿಗೆ ಇಲಾಖೆಯ 10 ತಿಂಗಳ ತರಬೇತಿ ಹಾಗೂ ಪಿಯುಸಿ ತೇರ್ಗಡೆ ಹೊಂದಿರಬೇಕೆಂಬ ನಿಯಮವಿತ್ತು.



ಆದರೆ ಇದೀಗ ಸರಕಾರ ನಿಯಮವನ್ನು ಬದಲಾಯಿಸಿ ತೋಟಗಾರಿಕೆ ವಿಷಯದಲ್ಲಿ ಬಿಎಎಸ್ ಸಿ ಪದವಿ ಪಡೆದವರು ಅರ್ಹರು ಎಂದು ಆದೇಶ ಹೊರಡಿಸಿದೆ. ಇದರಿಂದ 10 ತಿಂಗಳ ತರಬೇತಿ ಪಡೆದ ರೈತರ ಮಕ್ಕಳಾದ ನಮಗೆ ಅನ್ಯಾಯವಾಗಿದೆ ಎಂದು ತರಬೇತಿ ಪಡೆದ ವಿದ್ಯಾರ್ಥಿಗಳು ಮನವಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಕಳೆದ 5 ವರ್ಷಗಳಲ್ಲಿ ಕೇವಲ 200 ಗಾರ್ಡನರ್ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗಿದ್ದು, ಇನ್ನು ಹಲವಾರು ಹುದ್ದೆಗಳು ಇಲಾಖೆಯಲ್ಲಿ ಖಾಲಿ ಇವೆ. ಹೊಸ ಹುದ್ದೆಗಳನ್ನು ತುಂಬುವ ಸಮಯದಲ್ಲಿ 10 ತಿಂಗಳ ತರಬೇತಿ ಪಡೆದ ತಮ್ಮನ್ನೂ ಪರಿಗಣಿಸಬೇಕು. ಅರ್ಜಿ ಸಲ್ಲಿಸಲು ಅವಕಾಶ ದೊರೆಯಬೇಕೆಂದು ಮನವಿ ಮಾಡಲಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ