LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶೀಘ್ರವೆ ನೀರಾವರಿ ಇಲಾಖೆಯ ಖಾಲಿ ಹುದ್ದೆ ಭರ್ತಿ ಮಾಡಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರರಿಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾಜೇಂದ್ರ ವಡ್ಡರ ಪತ್ರ

Advertisement
ನಿಪ್ಪಾಣಿ : ನೀರಾವರಿ ನಿಗಮ ಉತ್ತರ ವಲಯದಲ್ಲಿಇಂಜಿನಿಯರ್, ಸಹಾಯಕ ಇಂಜಿನಿಯರ್, ಕಿರಿಯಸ್ ಇಂಜಿನಿಯರ, ಸೇರಿ ತಾಂತ್ರಿಕ ವಿಭಾಗದಲ್ಲಿ ಅನೇಕರು ಮಹತ್ವದ ಕಾರ್ಯನಿರ್ವಹಿಸುತ್ತಾರೆ. ಆದರೆ ನೀರಾವರಿ ಇಲಾಖೆಯಲ್ಲಿ ಸದರಿ ಹುದ್ದೆಗಳು ಅನೇಕ ವರ್ಷಗಳಿಂದ ಖಾಲಿ ಇದ್ದು ಅವುಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕೆಂದು ಭೋಜ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ರಾಜೇಂದ್ರ ಪವಾರ್ ವಡ್ಡರ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರಾದ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದು ಅಗ್ರಹಿಸಿದ್ದಾರೆ. ಈ ಕುರಿತು ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಕುರಿತು ಅಧಿಕ ಮಾಹಿತಿ ನೀಡಿದ ಅವರು ನೀರಾವರಿ ನಿಗಮ ಉತ್ತರ ವಲಯಕ್ಕೆ ಬರುವ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯ ಕಾರ್ಯಾಲಯಗಳಲ್ಲಿ ಕಾರ್ಯನಿರ್ವಾಹಕ, ತಾಂತ್ರಿಕ ಸಹಾಯಕರು, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಇಂಜಿನಿಯರ್, ಕೆರಿಯ ಎಂಜಿನಿಯರ್ ಭೂ ವಿಜ್ಞಾನ,ಸಿ ಗ್ರೂಪ್ ಹಾಗೂ ಡಿ ಗ್ರೂಪ್ ಹುದ್ದೆಗಳು ಸೇರಿ ಒಟ್ಟು 1322 ಹುದ್ದೆಗಳು ಈಗಾಗಲೇ ಮಂಜೂರಾಗಿದ್ದು ಇದರಲ್ಲಿ ಒಟ್ಟು 610 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು ಖಾಲಿ ಇರುವ 712 ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿಕೊಳ್ಳಬೇಕೆಂದುಅಗ್ರಹಿಸಿದರು. ಈಗಾಗಲೇ ತಾಂತ್ರಿಕ ಶಿಕ್ಷಣ ಪಡೆದ ನಿರುದ್ಯೋಗಿ ಯುವಕರು ಅಧಿಕ ಸಂಖ್ಯೆಯಲ್ಲಿದ್ದು ಸದರಿ ಹುದ್ದೆಗಳನ್ನು ಭರ್ತಿ ಮಾಡಿದರೆ ನಿರುದ್ಯೋಗ ಸಮಸ್ಯೆಗೆ ಒತ್ತು ನಿಡಿದಂತಾಗುತ್ತದೆ. ಆದ್ದರಿಂದ ಆದಷ್ಟು ಬೇಗ ನೀರಾವರಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಗಳತಗಾ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ದಗಡು ವಡ್ಡರ ಮಂಜುನಾಥ್ ಚೌಗುಲೆ, ಮಹೇಶ ಮಿಟಕೆ, ಅಶೋಕ ವಡ್ಡರ, ವಿನಾಯಕ ಸಪಕಾಳ, ಓಂಕಾರ ಪೋವಾರ, ರೋಹಿತ ಪೋವಾರ ಉಪಸ್ಥಿತರಿದ್ದರು.

ವರದಿ: ಮಹಾವೀರ ಚಿಂಚಣೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ