Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಪರಿಷತ್ ಮಾಜಿ ಸದಸ್ಯ, ಶಿಕ್ಷಣ ತಜ್ಞ ಪ್ರೊ.ಎಂ.ಆರ್. ದೊರೆಸ್ವಾಮಿ ನಿಧನ 

Advertisement
ಬೆಂಗಳೂರು: ಪಿಇಎಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯರಾದ ಶಿಕ್ಷಣ ತಜ್ಞ ಪ್ರೊ.ಎಂ.ಆರ್. ದೊರೆಸ್ವಾಮಿ(89) ಗುರುವಾರ ನಿಧನರಾಗಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮನೆಯಲ್ಲಿ ಹಲವು ದಿನಗಳಿಂದ ವಿಷಯದಂತೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ.ಪೊಲೀಸ್ ಗೌರವಗಳೊಂದಿಗೆ ಶುಕ್ರವಾರ ಸಂಜೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.


ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ಸರ್ಕಾರದ ಶೈಕ್ಷಣಿಕ ಸುಧಾರಣೆಗಳ ಸಲಹೆಗಾರರಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಶಿಕ್ಷಕರಾಗಿ, ಮಾರ್ಗದರ್ಶಕರು, ಸಲಹೆಗಾರರಾಗಿ ನಿರಂತರ ಸೇವೆ ಸಲ್ಲಿಸಿದ್ದಾರೆ.


ಶಾಲಾ ಹಂತದಿಂದ ವಿಶ್ವವಿದ್ಯಾಲಯದ ಮಟ್ಟಕ್ಕೆ ಪಿಇಎಸ್ ಶಿಕ್ಷಣ ಸಂಸ್ಥೆ ಕೊಂಡೊಯ್ದಿದ್ದಾರೆ. ಪ್ರತಿವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂ. ವಿದ್ಯಾರ್ಥಿ ವೇತನ ನೀಡುತ್ತಿದ್ದರು. ವಿವಿಧ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದ್ದರು.

ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ರಾಜಕೀಯ, ಶಿಕ್ಷಣ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.


ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಚಲುವರಾಯಸ್ವಾಮಿ, ಡಾ.ಎಂ.ಸಿ. ಸುಧಾಕರ್ ಗುರುವಾರ ರಾತ್ರಿ ಮೃತರ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ