ತುಮಕೂರು : ಮಾಜಿ ಸಚಿವ ಹಾಗೂ ವಾಲ್ಮೀಕಿ ಸಮುದಾಯದ ಪ್ರಭಾವಿ ಹಿರಿಯ ನಾಯಕ ಸಿ. ವೀರಣ್ಣ ಅವರು ನಿನ್ನೆ ರಾತ್ರಿ ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಇಬ್ಬರು ಗಂಡು ಮಕ್ಕಳು, ಒಬ್ಬ ಮಗಳು ಹಾಗೂ ಅಪಾರ ಬಂಧು-ಮಿತ್ರರು, ಬೆಂಬಲಿಗರನ್ನು ಅಗಲಿದ್ದಾರೆ. ಮೃತರು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಮಾವ.
ರಾಜಕೀಯ ಪಯಣ
ವಕೀಲ ವೃತ್ತಿಯಿಂದ ರಾಜಕೀಯಕ್ಕೆ: ಆರಂಭದಲ್ಲಿ ವೃತ್ತಿಯಲ್ಲಿ ವಕೀಲರಾಗಿದ್ದ ವೀರಣ್ಣನವರು, ಬಳಿಕ ಸಾರ್ವಜನಿಕ ಸೇವೆಯತ್ತ ಆಕರ್ಷಿತರಾಗಿ ರಾಜಕೀಯಕ್ಕೆ ಧುಮುಕಿದ್ದರು.
ಡೆಪ್ಯೂಟಿ ಸ್ಪೀಕರ್ ಹಾಗೂ ಸಚಿವರಾಗಿ ಸೇವೆ
1983ರಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ (ಡೆಪ್ಯೂಟಿ ಸ್ಪೀಕರ್) ಆಯ್ಕೆಯಾಗಿದ್ದರು.
1984 ರಿಂದ 1989ರವರೆಗೆ ರಾಜ್ಯ ಸರ್ಕಾರದ ವಿವಿಧ ಮಹತ್ವದ ಇಲಾಖೆಗಳಲ್ಲಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.


