Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಘ್ನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾಜಿ ಪ್ರದಾನಿ ದೇವೇಗೌಡರ ಜನ್ಮದಿನಾಚರಣೆ

Advertisement
ಅರಸೀಕೆರೆ: ದೇಶದ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ ದೇವೇಗೌಡರ 93ನೇ ಹುಟ್ಟುಹಬ್ಬವನ್ನು ಅರಸೀಕೆರೆ ನಗರದ ವಿಘ್ನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಲಾಯಿತು ನಂತರ ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.



ಅರಸೀಕೆರೆ ತಾಲ್ಲೂಕು ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ಹಾಗೂ ರಾಂಪುರ ಶೇಖರಪ್ಪ ನೇತ್ರತ್ವದಲ್ಲಿ ನಡೆದ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮ

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಹೊಸೂರು ಗಂಗಾಧರ್ ದೇಶ ಕಂಡ ಅಪ್ರತಿಮ ರೈತ ನಾಯಕ ಹಾಸನ ಜಿಲ್ಲೆಯಿಂದ ಗೆದ್ದು ಕರ್ನಾಟಕ ರಾಜ್ಯದಿಂದ ಏಕ ಮಾತ್ರ ಪ್ರಧಾನಮಂತ್ರಿಯಾಗಿ ಆಡಳಿತ ಮಾಡಿದ ಎಚ್ ಡಿ ದೇವೇಗೌಡ ಅವರ ಜನ್ಮದಿನವನ್ನು ಆಚರಿಸುತ್ತಿರುವುದು ನಮ್ಮೆಲ್ಲರ ಸೌಭಾಗ್ಯ ನೂರಾರು ವರ್ಷ ಆರೋಗ್ಯವಾಗಿ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದರು .

ಜೆಡಿಎಸ್ ಮುಖಂಡ ರಾಂಪುರ ಶೇಖರಪ್ಪ ಮಾತನಾಡಿ ಇಂದು ಅರಸೀಕೆರೆ ತಾಲ್ಲೂಕು ಜೆಡಿಎಸ್ ಪಕ್ಷದಿಂದ ಮತ್ತು ದೇವೇಗೌಡರ ಅಭಿಮಾನಿಗಳ ನೇತ್ರತ್ವದಲ್ಲಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಆಸ್ಪತ್ರೆಯಲ್ಲಿ ಇದ್ದ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸುತಿದ್ದೇವೆ ದೇವೇಗೌಡರ ಗರಡಿಯಲ್ಲಿ ಬೆಳೆದ ಸಾಕಷ್ಟು ಜನ ಮುಖ್ಯಮಂತ್ರಿಗಳಾಗಿ ಸಚಿವರಾಗಿ ಕೇಂದ್ರ ಮಂತ್ರಿಗಳಾಗಿ ಅಧಿಕಾರ ವಹಿಸಿದ್ದಾರೆ ದೇವೇಗೌಡರ ಆಶೀರ್ವಾದ ಇನ್ನು ನಮಗೆಲ್ಲರಿಗೂ ಅಗತ್ಯವಿದೆ ದೇವೇಗೌಡರೇ ಒಂದು ಶಕ್ತಿ ಎಂದರು

ಈ ಸಂದರ್ಭದಲ್ಲಿ ಮಾಜಿ ಎಂ.ಎಲ್‌.ಎ ಪರಮೇಶ್ವರಪ್ಪ ,ಕುರುಬ ಸಮಾಜದ ಮುಖಂಡರು ಹಾಗೂ ಜೆಡಿಎಸ್ ಮುಖಂಡ ಕೆಂಕೆರೆ ಕೇಶವಮೂರ್ತಿ , ಕುಮಾರಣ್ಣ , ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್ , ರಮೇಶ್ ಮಾರುತಿ ನಗರ, ಲಾಳನಕೆರೆ ಯೋಗೀಶ್ , ನಿರಂಜನ್ , ಸಂತೋಷ್ , ಗಂಡಸಿ ಜೆಡಿಎಸ್ ಮುಖಂಡ ಆಲದ ಹಳ್ಳಿ ಶಂಕರ್ , ಅಶ್ವಥ್ , ವಿಭಿನ್, ಸೇರಿದಂತೆ ದೇವೇಗೌಡರ ಅಭಿಮಾನಿಗಳು ಉಪಸಿತರಿದ್ದರು .

ವರದಿ:  ರಾಜು ಅರಸಿಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ