Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಯತ್ರಿ ವಿದ್ಯಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Advertisement
ಸಿರುಗುಪ್ಪ: ನಗರದ ಗಾಯತ್ರಿ ವಿದ್ಯಾ ಮಂದಿರ ಶಾಲೆಯಲ್ಲಿ ವೈದೇಹಿ ಆಸ್ಪತ್ರೆ ಬೆಂಗಳೂರು, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಆಯುಷ್ ಇಲಾಖೆಗಳ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಶಕೀಬ್ ಅವರು ಉದ್ಘಾಟಿಸಿದರು.


ನಂತರ ಮಾತನಾಡಿ ಆರೋಗ್ಯಕರ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ನೊಂದವರ, ಬಡವರ ಆರೋಗ್ಯದ ಪರೀಕ್ಷೆಯನ್ನು ಬೆಂಗಳೂರಿನ ಉನ್ನತ ಗುಣಮಟ್ಟದ ಆಸ್ಪತ್ರೆಗಳ ವೈದ್ಯರು ತಪಾಸಣೆ ಮಾಡುತ್ತಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಡಾ.ಮದುಸೂಧನ ಕಾರಿಗನೂರು ಅವರು ಮಾತನಾಡಿ ಆರೋಗ್ಯವೇ ಮಹಾಭಾಗ್ಯವೆಂಬಂತೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿರುವ ಶಾಲಾ ಆಡಳಿತ ಮಂಡಳಿಯವರ ಬಡವರ ಪರ ಕಾಳಜಿಯು ಶ್ಲಾಘನೀಯ ಎಂದರು.


ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಜರೀನಾ ಶಕೀಬ್ ಅವರು ಮಾತನಾಡಿ ಮನುಷ್ಯನಿಗೆ ಆಯುಷ್ಯ ಎಷ್ಟು ಮುಖ್ಯವೋ ಅದರಂತೆ ಆರೋಗ್ಯವೂ ಮುಖ್ಯವಾಗಿದೆ. ನಮ್ಮೂರಿನ ಜನ ದೂರದ ಊರುಗಳಿಗೆ ಆರೋಗ್ಯಕ್ಕಾಗಿ ಅಲೆಯುವುದನ್ನು ತಪ್ಪಿಸಲು ಇಂತಹ ಕಾರ್ಯಕ್ರಮವನ್ನು ಏರ್ಪಡಿಸಿದ್ದು ನಾಗರೀಕರು ಇದರ ಸೌಲಭ್ಯವನ್ನು ಪಡೆಯಬೇಕೆಂದರು.
ಆರೋಗ್ಯ ತಪಾಸಣೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಸೇರಿ ಒಟ್ಟು 285ಕ್ಕೂ ಅಧಿಕ ಜನರ ಹೃದಯ, ಕಿಡ್ನಿ, ನರರೋಗ, ಕ್ಯಾನ್ಸರ್, ಎಲುಬು ಕೀಲು, ಕಣ್ಣಿನ ತಪಾಸಣೆ, ಹಾಗೂ ಸಾಮಾನ್ಯ ರೋಗಗಳ ತಪಾಸಣೆ ನಡೆಸಲಾಗಿದ್ದು, ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಮಾಜಮುಖಿ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರಾಂಶುಪಾಲರಾದ ಸ್ಟ್ಯಾನ್ಲಿ, ವೈದೇಹಿ ಆಸ್ಪತ್ರೆಯ ಹೃದಯತಜ್ಞ ಡಾ.ಮೋಹಿತ್, ಎಲುಬು ಕೀಲು ರೋಗ ತಜ್ಞ ಡಾ.ರುಹಾನ್, ಸಾಮಾನ್ಯ ರೋಗಗಳ ತಜ್ಞ ಡಾ.ಅಜಯ್ ರಾಮಕೃಷ್ಣ, ನೇತ್ರತಜ್ಞ ಡಾ.ಮಹಾಂತೇಶ್, ಆಯುಷ್ ಇಲಾಖೆಯ ಡಾ.ಭಾರತಿ, ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಮಲ್ಲಿಕಾರ್ಜುನ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಶಾಲಾ ಆಡಳಿತ ಮಂಡಳಿಯ ಸದಸ್ಯ ಅಬ್ದುಲ್ ಗನಿ ಇನ್ನಿತರ, ಶಿಕ್ಷಕವೃಂದ ಹಾಗೂ ಸಾರ್ವಜನಿಕರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ