LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  

Advertisement

ಕಲಾದಗಿ : ಗ್ರಾಮದ ಉರ್ದು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್  ವಿತರಿಸಲಾಯಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಉರ್ದು ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಸೋಲ್ಜರ್  ವಿದ್ಯಾರ್ಥಿಗಳಿಗೆ ಉಚಿತ ಶೂಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

 ಇದೆ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯ ಹಸನ ಅಹಮದ್ ಪೆಂಡಾರಿ, ಶಾಲೆಯ ಮುಖ್ಯೋಪಾಧ್ಯಾಯರಾದ ಜಿ ಎಸ್ ನಾಗರಾಳ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಕೊಠಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಮನೆಮಾಡಿತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಉಚಿತವಾಗಿ ಶೂಗಳನ್ನು ವಿತರಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಯಿತು.

ವಿದ್ಯಾರ್ಥಿಗಳ ಶಿಕ್ಷಣದ ಜೊತೆಗೆ ಅವರ ಅಗತ್ಯತೆಗಳಿಗೂ ಸ್ಪಂದಿಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಸಂದೇಶವನ್ನು ಮೂಡಿಸುತ್ತವೆ.

ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೀಲ್ಸ್ ವಿಚಾರವಾಗಿ ದಂಪತಿ ನಡುವೆ ಗಲಾಟೆ: ಹೆಂಡತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ ಸತೀಶ್ ಜಾರಕಿಹೊಳಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ : ಡಿ.ಕೆ.ಶಿವಕುಮಾರ್2 ವರ್ಷದ ಕಂದಮ್ಮನ ಮೇಲೆ ಹರಿದ ಕಾರು : ತಾಯಿ ಕಣ್ಣೆದುರೇ ದಾರುಣ ಸಾವುಯುಎಸ್ ಓಪನ್ ಟೆನಿಸ್: ಬೆನ್ ಸೇಲ್ಟನ್ ಸೆಮಿ ಪೈನಲ್ ಗೆ ವಿದ್ಯಾವಿಕಾಸ ಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣಾ ಕಾರ್ಯಕ್ರಮ  ಪಾಕಿಸ್ತಾನ- ಶ್ರೀಲಂಕಾ ಎರಡನೇ ಸೆಮಿಪೈನಲ್ ಸೆ. 11 ರಂದು ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ': ಹಣ ಕಳೆದುಕೊಂಡ ಸಾವಿರಾರು ಮಂದಿ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ ಸೇರಿ ಐದು ಕಡೆ ಇಡಿ ದಾಳಿ ನಾಳೆ ಭಾರತ- ಬಾಂಗ್ಲಾದೇಶ ಮೊದಲ ಸೆಮಿಪೈನಲ್