Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಿ. ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಅಭಿಮಾನಿಗಳಿಂದ ಮಜ್ಜಿಗೆ ವಿತರಣೆ

Advertisement
ಬಾಗೇಪಲ್ಲಿ : ಪಟ್ಟಣದ ದಿವಂಗತ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಅಭಿಮಾನಿಗಳಿಂದ ಅವರ ಸವಿನೆನಪಿಗಾಗಿ ಗೂಳೂರು ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ಪಟ್ಟಣದ ಗುಳೂರು ವೃತ್ತದಲ್ಲಿ ದಿವಂಗತ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ರವರ ಭಾವಚಿತ್ರಕ್ಕೆ ಗುಲಾಬಿ ಹೂವಿನ ಹಾರ ಹಾಕಿ ಗೌರವಿಸಿ, ದಿನಪೂರ್ತಿ ನೂರಾರು ಜನರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು.

ಈ ವೇಳೆಯಲ್ಲಿ ಮುಖಂಡ ವೆಂಕಟೇಶಪ್ಪರವರು ಮಾತನಾಡಿ, ದಿವಂಗತ ಮಾಜಿ ಶಾಸಕರಾದ ಜಿ.ವಿ.ಶ್ರೀರಾಮರೆಡ್ಡಿರವರು ಎರಡು ಭಾರೀ ಶಾಸಕರಾಗಿದ್ದ ಸಮಯದಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಲವಾರು ಅಭಿವೃದ್ಧಿ ಜನಪರ ಕಾರ್ಯಕ್ರಮಗಳನ್ನು ಮಾಡಿದ್ದರು.ಅವರ ಅವಧಿಯಲ್ಲಿ ಆದ ಜನಪರ ಯೋಜನೆಗಳು ಜನರು ಈಗಲೂ ಸಹ ಮರೆಯಲು ಸಾಧ್ಯವಿಲ್ಲ. ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆ, ಬಸ್ ಡಿಪೋ, ಬಸ್ ನಿಲ್ದಾಣ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸರ್ಕಾರಿ ಆಸ್ಪತ್ರೆ, ಚಿತ್ರಾವತಿ ಡ್ಯಾಂ, ಬಡವರಿಗೆ ನಿವೇಶನಗಳನ್ನು ವಿತರಣೆ, ಹೀಗೆ ಹಲವಾರು ಯೋಜನೆಗಳ ಮುಖಾಂತರ ಬಾಗೇಪಲ್ಲಿ ತಾಲ್ಲೂಕು ಅಭಿವೃದ್ಧಿ ಮಾಡಿ, ಬಾಗೇಪಲ್ಲಿ ತಾಲ್ಲೂಕು ಜನನಾಯಕ 'ಅಭಿವೃದ್ಧಿಯ ಸರದಾರ' 'ಅಭಿವೃದ್ಧಿ ಹರಿಕಾರಕ' ಎನ್ನಿಸಿಕೊಂಡಿರುವ ದಿವಂಗತ ಜಿ.ವಿ. ಶ್ರೀರಾಮರೆಡ್ಡಿರವರ ಸವಿನೆನಪಿಗಾಗಿ ಪ್ರತಿವರ್ಷ ಅನ್ನದಾನ ಕಾರ್ಯಕ್ರಮಗಳನ್ನು ಕಳೆದ ಮೂರು ವರ್ಷಗಳಿಂದ ಮಾಡುತ್ತಿದ್ದು, ಈ ವರ್ಷ ದಿವಂಗತ ಜಿ.ವಿ.ಶ್ರೀರಾಮರೆಡ್ಡಿರವರ ಸವಿನೆನಪಿಗಾಗಿ ಸಾರ್ವಜನಿಕ ರಿಗೆ ತಂಪಾದ ಮಜ್ಜಿಗೆಯನ್ನು ನೀಡುತ್ತಿದ್ದೆವೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ರಷೀದ್, ಅಬುಬಕರ್, ರಮಣ, ರಾಮಾಂಜಿ, ಮುಂತಾದವರು ಹಾಜರಿದ್ದರು.

ವರದಿ: ಬಿ.ಎ.ಬಾಬಾಜಾನ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ