Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಮುಂದೆ ವಾರದಲ್ಲಿ ಆರು ದಿನ ಮಕ್ಕಳಿಗೆ ಮೊಟ್ಟೆ : ಬೆಳಗಾವಿಯಲ್ಲಿ ಶಿಕ್ಷಣ ಸಚಿವರಿಂದ ಚಾಲನೆ

Advertisement
ಬೆಳಗಾವಿ: ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ನಮ್ಮ‌ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ಅನ್ನು ವಿದ್ಯಾರ್ಥಿಗಳಿಂದ ಅನಾವವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ‌ಪಡಿಸಲು ಸರಕಾರದ ಜೊತೆಗೆ ದಾನಿಗಳು ಕೈಜೋಡಿಸಿದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳಿಗೆ ಉತ್ತಮ‌ ಶಿಕ್ಷಣ ನೀಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದರು.

ರಾಜ್ಯದಲ್ಲಿ ಸರ್ಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಅಂದಾಜು 56 ಲಕ್ಷ ವಿಧ್ಯಾರ್ಥಿಗಳಿದ್ದು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಳೆಜುಗಳಲ್ಲಿ ಅಂದಾಜು ಒಂದು ಕೋಟಿ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಕಳೆದ ಶೈಕ್ಷಣಿಕ ವರ್ಷದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಗೆ ಮೂರು ಬಾರಿ ಅವಕಾಶ ನೀಡಲಾಗಿದ್ದು, ಈ ಅವಕಾಶದ ಸದುಪಯೋಗ ಪಡೆದುಕೊಂಡ 82 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಇಂದು ಕಾಲೇಜುಗಳಿಗೆ ಪ್ರವೇಶ ಪಡೆದಿರುತ್ತಾರೆ ಎಂದರು.

ಶಾಲಾ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ ನೀಡುವದು ಸರಕಾರದ ಧ್ಯೇಯವಾಗಿದ್ದು, ಈ ಹಿನ್ನಲೆಯಲ್ಲಿ ಅಜೀಂ ಪ್ರೇಮಜಿ‌ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ‌ ನೀಡಲಾಗುತ್ತಿರುವ‌ ಮೊಟ್ಟೆಯನ್ನು ವಾರದ ಆರು‌ ದಿನಗಳ ಕಾಲ ವಿತರಿಸುವ ಕಾರ್ಯಕ್ರಮಕ್ಕೆ ಸೆ. 25 ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದರು.

ಸರಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ‌ ಪ್ರಾರಭದಿಂದಲೇ ನೀಡುವ ಸದುದ್ದೇಶದೊಂದಿಗೆ 45 ಸಾವಿರ ಅತಿಥಿ ಶಿಕ್ಷಕರಿಗೆ ಶಾಲಾ ಪ್ರಾರಂಭಕ್ಕೆ ಮುನ್ನವೆ ನೇಮಕಾತಿ ಆದೇಶ ಪ್ರತಿಗಳನ್ನು ವಿತರಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಕಿ ರಾಜ್ಯ ಸರ್ಕಾರದಿಂದ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ 1008 ಎಲ್.ಕೆ.ಜಿ., ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಕ್ರಮೇಣ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ವಹಿಸಲಾಗುವುದು ಎಂದರು.

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ