Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : 400 ಸಿನಿಮಾ ಪ್ರದರ್ಶನ

Advertisement
ಬೆಂಗಳೂರು : ಇಂದಿನಿಂದ (ಮಾ. 1) ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ.

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಟ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಮಾರ್ಚ್ 1 ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಆಹ್ವಾನಿಸಿದರು.

ಈ ಬಾರಿ ಚಿತ್ರೋತ್ಸವದಲ್ಲಿ ವಿಶೇಷವಾಗಿ ಎಐ ತಂತ್ರಜ್ಞಾನದ ಕುರಿತ ವಿಶೇಷ ಕಾರ್ಯಾಗಾರ ಇರಲಿದ್ದು, ಸಿನಿಮಾ ಕ್ಷೇತ್ರದ ಮೇಲೆ ಎಐ ತಂತ್ರಜ್ಞಾನದ ಪ್ರಭಾವದ ಕುರಿತು ತಜ್ಞರಿಂದ ಕಾರ್ಯಾಗಾರ ನಡೆಯಲಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1ರಿಂದ 8ರ ವರೆಗೆ ನಡೆಯಲಿದೆ. ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.

2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ.

ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ