Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರ ದಿನಾಚರಣೆ: ರೋಗಿಗಳಿಗೆ ಹಣ್ಣು ವಿತರಣೆ

Advertisement
ಭಾಲ್ಕಿ:ಶಿಕ್ಷಕರ ದಿನಾಚರಣೆಯ ಅಂಗವಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳನ್ನು ಒಳಗೊಂಡ ಕಲ್ಯಾಣ ಕರ್ನಾಟಕ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಬಾಲಾಜಿ ಬೈರಾಗಿ ಅವರ ಅಧ್ಯಕ್ಷತೆಯಲ್ಲಿ ಭಾಲ್ಕಿ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೃದಯಸ್ಪರ್ಶಿ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ಸಂಘದ ವತಿಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿ,ಸಮಾಜ ಸೇವೆಯ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಣೆ ಮಾಡುವ ಮೂಲಕ ಸಾರ್ಥಕಗೊಳಿಸಲಾಯಿತು.



ಬಾಲಾಜಿ ಬೈರಾಗಿ ಮಾತನಾಡಿ ಶಿಕ್ಷಕರು ಕೇವಲ ಪಾಠ ಹೇಳುವವರಲ್ಲ, ಅವರು ಸಮಾಜದಲ್ಲಿ ಮೌಲ್ಯಗಳ ಬೆಳಕನ್ನು ಹರಡುವವರು. ಶಿಕ್ಷಕರ ದಿನವನ್ನು ವಿದ್ಯಾರ್ಥಿಗಳಷ್ಟೇ ಅಲ್ಲ, ಸಮಾಜದ ಪ್ರತಿಯೊಬ್ಬರ ಜೀವನವನ್ನು ಸ್ಪರ್ಶಿಸುವ ದಿನವನ್ನಾಗಿಸಬೇಕು. ರೋಗಿಗಳಿಗೆ ಧೈರ್ಯ ತುಂಬುವುದು ನಮ್ಮ ಮಾನವೀಯ ಜವಾಬ್ದಾರಿಯಾಗಿದೆ.ಸಾಮಾಜಿಕ ಸೇವೆಗಳು ಮಾಡುವ ಮೂಲಕ ಗುರುಗಳಿಗೆ ಸಮಾಜದಲ್ಲಿ ಗೌರವ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಾನವೀಯತೆ, ಕರುಣೆ, ಸೇವಾಭಾವನೆಗಳನ್ನು ಪ್ರತಿಪಾದಿಸುವ ಈ ಕಾರ್ಯ ಸಮಾಜಕ್ಕೆ ಪ್ರೇರಣೆಯಾಗಿದ್ದು, ಇತರ ಸಂಘಟನೆಗಳಿಗೂ ಮಾದರಿಯಾಗಿದೆ.



ಕಾರ್ಯಕ್ರಮದಲ್ಲಿ ಸಂತೋಷ ವಾಡೆ,ವಿಶ್ವನಾಥ ಕರಕರೇ,ಅಶೋಕ ಬಿರಾದರ,ರಾಜಶೇಖರ,ನೀಲಕಂಠ ಕುರುಣೆ,ವಿಜಯಕುಮಾರ,ಜಗನಾಥ ಸೋನೆ,ಭೀಮಣ್ಣ ಕೊಂಕಣಿ,ಅಶೋಕ ಮಲ್ಲೇಶಿ,ಹಣಮಶೆಟ್ಟಿ, ರಾಜಕುಮಾರ,ಬಸವರಾಜ,ಸತೀಶ,ಯಲ್ಲಪ್ಪ ಸೇರಿದಂತೆ ಅನೇಕ ಪದಾಧಿಕಾರಿಗಳು,ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವರದಿ:ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ