ಗುರುಮಠಕಲ್ : ಪಟ್ಟಣದಲ್ಲಿ ವಿವಿಧ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಿಲ್ಲದ ಕಾರಣ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಟು ವೀಲರ್ ಹಾಗೂ ಫೋರ್ ವೀಲರ್ ವಾಹನ ಸವಾರರು ಇಂಧನಕ್ಕಾಗಿ ಒಂದು ಬಂಕ್ನಿಂದ ಮತ್ತೊಂದು ಬಂಕ್ಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮೇ ತಿಂಗಳಲ್ಲಿ ಮದುವೆ ಸಮಾರಂಭಗಳು ಹೆಚ್ಚಿರುವ ಹಿನ್ನೆಲೆ ಅನೇಕ ಕುಟುಂಬಗಳು ಕಾರ್ಯಕ್ರಮಗಳಿಗೆ ತೆರಳಲು ಸಾಧ್ಯವಾಗದೇ ಸಂಕಷ್ಟ ಅನುಭವಿಸುತ್ತಿವೆ. ಇಂಧನ ಕೊರತೆಯಿಂದ ಜನರು ತಮ್ಮ ಅಗತ್ಯ ಕಾರ್ಯಗಳನ್ನು ಕೂಡ ನಡೆಸಲಾಗದೆ ಪರದಾಡುತ್ತಿದ್ದಾರೆ.

ಪಟ್ಟಣದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ “ಇಂಧನ ಲಭ್ಯವಿಲ್ಲ” ಎಂಬ ಫಲಕಗಳು ಕಾಣಿಸಿಕೊಂಡಿದ್ದು, ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೆಲ ವಾಹನ ಸವಾರರು ಗಂಟೆಗಳ ಕಾಲ ಕಾಯುತ್ತಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ಸಿಗದೆ ನಿರಾಶರಾಗಿ ಹಿಂದಿರುಗುತ್ತಿರುವ ದೃಶ್ಯಗಳು ಕಂಡುಬಂದಿವೆ.
ಇಂಧನ ಕೊರತೆಯಿಂದ ವಿದ್ಯಾರ್ಥಿಗಳು, ಉದ್ಯೋಗಸ್ಥರು, ವ್ಯಾಪಾರಿಗಳು ಹಾಗೂ ರೈತರು ಕೂಡ ಸಂಕಷ್ಟ ಅನುಭವಿಸುತ್ತಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತೈಲ ಕಂಪನಿಗಳು ಕ್ರಮ ಕೈಗೊಂಡು ಗುರುಮಠಕಲ್ ಪಟ್ಟಣಕ್ಕೆ ಸಮರ್ಪಕ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ : ರವಿ ಬುರನೋಳ್

