Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ವಿಜಯ ವಿದ್ಯಾಶಾಲೆಯಲ್ಲಿ ಸಂಭ್ರಮದ ಗಣಪತಿ ವಿಸರ್ಜನಾ ಮಹೋತ್ಸವ

Advertisement
ತುರುವೇಕೆರೆ : ಪಟ್ಟಣದ ವಿಶ್ವವಿಜಯ ವಿದ್ಯಾಶಾಲೆಯಲ್ಲಿ ಅದ್ದೂರಿಯಾಗಿ ಗಣಪತಿ ವಿಸರ್ಜನಾ ಮಹೋತ್ಸವವನ್ನು ನಡೆಸಲಾಯಿತು. ಭಾದ್ರಪದ ಶುಕ್ಲ ಚತುರ್ಥಿಯಂದು ಶಾಲೆಯಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಭಕ್ತಿ ಶ್ರದ್ಧೆಯಿಂದ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯಗಳನ್ನು ನಡೆಸಲಾಗಿತ್ತು. ಮೂರು ದಿನದ ನಂತರ ಇಂದು ಗಣಪತಿಗೆ ವಿಶೇಷ ಪೂಜೆ ಮಂಗಳಾರತಿ ನೆರವೇರಿಸಿ ಶಾಲೆಯ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಪ್ರಸಾದ ವಿತರಿಸಲಾಯಿತು. ನಂತರ ಗಣಪತಿಯನ್ನು ಅಲಂಕರಿಸಿದ ಟ್ರಾಕ್ಟರ್ ನಲ್ಲಿ ಕೂರಿಸಿ ಮೆರವಣಿಗೆ ಮೂಲಕ ಕರೆದೊಯ್ದು ಅರೆಮಲ್ಲೇನಹಳ್ಳಿ ರಸ್ತೆಯಲ್ಲಿರುವ ಕೃಷಿಹೊಂಡದಲ್ಲಿ ವಿಸರ್ಜಿಸಲಾಯಿತು.



ಗಣಪತಿಯನ್ನು ವಾಹನಕ್ಕೆ ಕರೆತರುವ ಹಾಗೂ ಮೆರವಣಿಗೆ ವೇಳೆ ಶಾಲೆಯ ಮಕ್ಕಳು ನೃತ್ಯ ಮಾಡಿ ಕುಣಿದು ಕುಪ್ಪಳಿಸಿದರು. ಗಣಪತಿಗೆ ಜೈ, ವಿಘ್ನವಿನಾಯಕನಿಗೆ ಜೈ, ಲಂಬೋದರನಿಗೆ ಜೈ, ವಿದ್ಯಾಗಣಪತಿಗೆ ಜೈ ಎಂದು ಕೂಗುತ್ತಾ ಸಂಭ್ರಮಿಸಿದರು. ಮಕ್ಕಳೊಂದಿಗೆ ಕೆಲವು ಪೋಷಕರು, ಶಿಕ್ಷಕರು ಸಹ ಕುಣಿದು ಕುಪ್ಪಳಿಸಿ ಮಕ್ಕಳಲ್ಲಿನ ಸಂತೋಷವನ್ನು ಇಮ್ಮಡಿಗೊಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಶಾಲೆಯ ಕಾರ್ಯದರ್ಶಿ ಮತ್ತು ಪ್ರಾಂಶುಪಾಲೆ ವಿಜಯಲಕ್ಷ್ಮೀ ವಿಶ್ವೇಶ್ವರಯ್ಯ, ಪ್ರತಿವರ್ಷದಂತೆ ಈ ವರ್ಷವೂ ಶಾಲೆಯಲ್ಲಿ ಗಣಪತಿಯನ್ನು ಕೂರಿಸಿ ಪೂಜಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ವಿಘ್ನ ನಿವಾರಕ ಹಾಗೂ ಮಕ್ಕಳಲ್ಲಿ ಸಂಸ್ಕಾರ, ವಿದ್ಯೆ, ಸನ್ನಡತೆಗೆ ಪ್ರಥಮ ಪೂಜಿತನಾದ ಗಣಪತಿಯ ಆರ್ಶೀವಾದ ಬಹಳ ಮುಖ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯೆ, ಬುದ್ದಿ, ಜ್ಞಾನ ಹೆಚ್ಚಿಸಲು ಹಾಗೂ ನಮ್ಮ ಸಂಸ್ಕೃತಿ ಸಂಪ್ರದಾಯದ ಅರಿವನ್ನು ಮಕ್ಕಳಲ್ಲಿ ಮೂಡಿಸುವ ಸಲುವಾಗಿ ಗಣಪತಿಯನ್ನು ಅಲಂಕರಿಸುವ, ಪೂಜಿಸುವ ಕೆಲಸವನ್ನು ಮಕ್ಕಳಿಗೆ ಬಿಡಲಾಗುತ್ತದೆ. ಮಕ್ಕಳು ಸಂಭ್ರಮದಿಂದ ಗಣಪತಿಯನ್ನು ವಿಶೇಷವಾದ ಮಂಟಪದಲ್ಲಿ ಕೂರಿಸಿ, ಅಲಂಕರಿಸಿ ಭಕ್ತಿ, ಶ್ರದ್ಧೆ ಹಾಗೂ ಸಂತೋಷದಿಂದ ಗಣಪತಿ ಹಬ್ಬವನ್ನು ಆಚರಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಪ್ರವೀಣ್ ಗೌಡ, ಆಡಳಿತಾಧಿಕಾರಿ ಪ್ರಶಾಂತ್, ನಿರ್ದೇಶಕಿ ಶೋಭಾಸುಬ್ರಮಣ್ಯ, ಶಾಲೆಯ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ