Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ ತಹಶೀಲ್ದಾರರಾಗಿ ಗೌಸಿಯಾ ಬೇಗಂ ಅಧಿಕಾರ ಸ್ವೀಕಾರ

Advertisement
ಸಿರುಗುಪ್ಪ : ನಗರದ ತಹಶೀಲ್ದಾರ್ ಕಛೇರಿಯಲ್ಲಿ ಗೌಸಿಯಾ ಬೇಗಂ ಅವರು ತಹಶೀಲ್ದಾರರಾಗಿ ಜೂನ್.30 ಸೋಮವಾರ ಸಾಯಂಕಾಲ ಅಧಿಕಾರ ಸ್ವೀಕರಿಸಿದರು. ಪ್ರಭಾರಿ ತಹಶೀಲ್ದಾರರಾಗಿದ್ದ ನರಸಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.

ನಂತರ ಮಾತನಾಡಿ ಕಳೆದ ಕೆಲ ತಿಂಗಳಿನಿಂದ ನಾನು ಪ್ರಭಾರಿಯಾಗಿ ನಿರ್ವಹಿಸಿದ ನನಗೆ ಇಲ್ಲಿನ ಕಂದಾಯ ಮತ್ತು ಆಹಾರ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅದರಂತೆ ಈಗಿನ ತಹಶೀಲ್ದಾರರಾದ ಗೌಸಿಯಾ ಮೇಡಂ ಅವರಿಗೂ ಸಹಕರಿಸಬೇಕೆಂದು ತಿಳಿಸಿದರು.

ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಮಾತನಾಡಿ ನಮ್ಮದು ಎಲ್ಲಾ ಇಲಾಖೆಗಳ ಉಸ್ತುವಾರಿಯನ್ನು ನೋಡಿಕೊಳ್ಳುವ ದೊಡ್ಡ ಇಲಾಖೆಯಾಗಿದ್ದರಿಂದ ಹಲವು ಒತ್ತಡಗಳಿರುವುದು ಸಾಮಾನ್ಯ.

ಆದ್ದರಿಂದ ನಾವೆಲ್ಲರೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕಿದೆ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜೊತೆಗೂಡಿ ಉತ್ತಮ ಕಾರ್ಯನಿರ್ವಹಿಸೋಣವೆಂದರು.

ಕುರುಗೋಡು ತಾಲೂಕಿಗೆ ತಮ್ಮ ಸ್ಥಾನಕ್ಕೆ ಮರಳಿದ ತಹಶೀಲ್ದಾರ್ ನರಸಪ್ಪ ಅವರನ್ನು ಸ್ಮನಾನಿಸಿ ಕಂದಾಯ ಇಲಾಖೆ ಅಧಿಕಾರಿಗಳಿಂದ ಬೀಳ್ಕೊಡಲಾಯಿತು.ನೂತನ ತಹಶೀಲ್ದಾರರನ್ನು ಅಭಿನಂದಿಸಲಾಯಿತು.

ಇದೇ ವೇಳೆ ಉಪತಹಶೀಲ್ದಾರರಾದ ಯಾಕೂಬ್ ಅಲಿ, ಸಿದ್ದಾರ್ಥ್ ಕಾರಂಜಿ, ಕಂದಾಯ ನಿರೀಕ್ಷಕರಾದ ಮಂಜುನಾಥ, ಮಲ್ಲಿಕಾರ್ಜುನ, ಹನುಮಂತಪ್ಪ, ಶೇಕ್ಷಾವಲಿ, ಗ್ರಾಮಾಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಮ್.ರಾಮಪ್ಪ, ತಾಲೂಕಾಧ್ಯಕ್ಷ ಮಂಜುನಾಥ, ಕಂದಾಯ ಇಲಾಖೆ ತಾಲೂಕಾಧ್ಯಕ್ಷ ಶ್ರೀಶೈಲ, ಹಿರಿಯ ಅಧಿಕಾರಿ ಪರಮೇಶಪ್ಪ ಹಾಗೂ ಗ್ರಾಮಾಡಳಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

ವರದಿ : ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ