Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ನೇತೃತ್ವದಲ್ಲಿ ಸಾಮಾನ್ಯ ಸಭೆ

Advertisement
ರಾಮದುರ್ಗ : ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಪುರಸಭೆ ಮೊದಲನೇ ಮಹಡಿ ಸಭಾಭವನದಲ್ಲಿ ಇಂದು 2025-26 ನೆ ಸಾಲಿನ ಪುರಸಭೆಯ ನೂತನವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಪ್ರಥಮ ಸಾಮಾನ್ಯ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮತ್ತು ನೂತನವಾಗಿ ಆಯ್ಕೆಯಾದ ನಾಮ ನಿರ್ದೇಶಿತ ಸದಸ್ಯರುಗಳಿಗೆ ಸ್ವಾಗತ ಕೋರಿ ಸನ್ಮಾನ ಮಾಡಿದರು.

ಈ ಸಾಮಾನ್ಯ ಸಭೆಯಲ್ಲಿ ನಡೆದ ವಿಷಯಗಳು :

1) ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸ್ವಾಗತ ಕೋರುವುದು. 2) ನೂತನವಾಗಿ ಆಯ್ಕೆಯಾದ ನಾಮ ನಿರ್ದೇಶತ ಸದಸ್ಯರುಗಳಿಗೆ ಸ್ವಾಗತ ಕೋರುವವರು. 3) ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಕುರಿತು ವಿಚಾರ.4) ಸನ್ 2025-26 ನೇ ಸಾಲಿನ ವಾರ್ಷಿಕ ಟೆಂಡರ್ ಕರೆಯುವ ವಿಚಾರ ಬಗ್ಗೆ. 5) ಈ ಆಸ್ತಿ ಗಣಕೀಕರಣ ಪ್ರಗತಿ ಕುರಿತು ವಿಚಾರ. 6) ಸಿಬ್ಬಂದಿ ಕಾರ್ಯವಿಧಾನದ ಬಗ್ಗೆ ಚರ್ಚೆ. 7) ಸಾರ್ವಜನಿಕರಿಂದ ಹಾಗೂ ಸಂಘ ಸಂಸ್ಥೆಗಳಿಂದ ಬಂದತಹ ಅರ್ಜಿಗಳ ಕುರಿತು ವಿಚಾರ. 8) ಪುರಸಭೆ ಮಾಲೀಕತ್ವದ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಕುರಿತು ವಿಚಾರ. 9) ರಾಮದುರ್ಗ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸುಭಾಷ್ ಚಂದ್ರ ಬೋಸ್ ಶಾಲೆಯಲ್ಲಿ ಖಾಲಿ ಇರುವ ಅಡುಗೆ ಸಿಬ್ಬಂದಿಗಳ ಆಯ್ಕೆ ಕುರಿತು ವಿಚಾರ.10) ರಾಮದುರ್ಗ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಡ್ಡರ ಓಣಿ ಹೆಸರು ಬದಲಾವಣೆ ಮಾಡಿ ಸಿದ್ಧರಾಮೇಶ್ವರ ನಗರ ಅಂತ ನಾಮಕರಣ ಮಾಡುವ ಕುರಿತು ವಿಚಾರ. 11) ಮಾನ್ಯ ಅಧ್ಯಕ್ಷರ ಅಪ್ಪನೇ ಮೇರೆಗೆ ಬರಬಹುದಾದ ವಿಷಯಗಳ ಬಗ್ಗೆ ಈ ಎಲ್ಲ ವಿಷಯಗಳ ಬಗ್ಗೆ 27 ವಾರ್ಡಗಳ ಸದಸ್ಯರ ಮುಂದೆ ಚರ್ಚೆ ನಡೆಸಲಾಯಿತು.

ಈ ಹನ್ನೊಂದು ಚರ್ಚಿಸು ತಕ್ಕಂತಹ ವಿಷಯಗಳ ನಡುವೆ ಕೆಲವು ಸದಸ್ಯರು ಹಾಗೂ ಸ್ಥಾಯಿ ಸಮಿತಿಯ ಸದಸ್ಯರು ಇ ಆಸ್ತಿ ಗಳ ಬಗ್ಗೆ ಮತ್ತು ಕೆಲವು ವಾರ್ಡಗಳಲ್ಲಿ ಕುಡಿಯುವ ನೀರಿನ ಬಗ್ಗೆ ಇನ್ನು ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದರು.

ಸಭೆಯ ಮುಗುದ ನಂತರ ಅಧ್ಯಕ್ಷರು ಉಪಾಧ್ಯಕ್ಷರು ಎಲ್ಲ ಸರ್ವ ಸದಸ್ಯರು ಕೂಡಿಕೊಂಡು ಹೊಸದಾಗಿ ಗಣ ತಾಜ್ಯ ವಿಲೇವಾರಿಗಾಗಿ ತಂದಂತ ಟ್ಯಾಕ್ಟರ್ ಡೋಜರ್ ಗೆ ಪೂಜೆ ಮಾಡಿ ಚಲನಗೆ ನೀಡಿದರು.

ವರದಿ : ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ