LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಲಾ ಮಕ್ಕಳಿಗೆ ಆಟದ ಮೈದಾನ ನಿರ್ಮಾಣಕ್ಕೆ ಮನವಿ

Advertisement
ಸೇಡಂ: ತಾಲೂಕಿನ ಸೀಲಾರಕೊಟ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂಬಾಗದ ಜಾಗ ಸುಮಾರು ೧೨ಗುಂಟೆ ಇರುತ್ತದೆ ಅದನ್ನು ಶಾಲಾ ಮಕ್ಕಳಿಗೆ ಆಟದ ಮೈದನವಾಗಿ ಮಾಡಿಕೊಡಬೇಕು ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ರಾಮಕೃಷ್ಣ ಮತ್ತು ನರೇಶ್, ಹಾಗೂ ಶ್ರೀನಿವಾಸ್ ಕಾವಲಿ ಅವರು ಪೋಷಕರ ಪರವಾಗಿ ಅಧಿಕಾರಿಗಳಿಗೆ ಮನವಿ ಮಾಡಿದರು.

ಇದೀಗ ಅನೇಕ ಬಾರಿ ತಾಲೂಕ ಪಂಚಾಯತ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಶಾಲೆಯ ಹಿಂಬಾಗದಲ್ಲಿ ಸರಕಾರಿ ಸ್ಥಳವಾಗಿದ್ದು ಅದು ಕಾಲಿಜಾಗ ಆಗಿರುವುದರಿಂದ ಅಲ್ಲಿ ಸಾರ್ವಜನಿಕರು ಮಲಮೂತ್ರ ವಿಸರ್ಜನೆ ಮಾಡಿತಿದ್ದಲ್ಲದೆ, ಮೋರಿ ನೀರು ಸಹ ತುಂಬಿ ಶಾಲಾ ಮಕ್ಕಳಿಗೆ ದುರ್ವಾಸನೆ ಜೊತೆಗೆ, ಸೊಳ್ಳೆಗಳ ಕಾಟ ಹೆಚ್ಚಾಗಿದೆ, ಅದರಿಂದ ಅನೇಕ ಕಾಯಿಲೆಗಳು ಬಂದು ಮಕ್ಕಳಿಗೆ ತೊಂದರೆ ಆಗುವ ಸಾದ್ಯತೆ ಇದೆ.



ಕೆಲ ವರ್ಷಗಳ ಹಿಂದೆಯೇ ದೊಡ್ಡ ಸಂಕಟ ಎದುರಿಸಿದರು ಇಲ್ಲಿನ ಮಕ್ಕಳು. ಇಂತಹ ವಿಷಪೂರಿತ ವಾತಾವರಣ ಶಾಲೆಗೆ ನುಗ್ಗಿ ಮಕ್ಕಳಿಗೆ ವಾಂತಿಭೇದಿ ಆಗಿತ್ತು.

ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದುವಾರದೊಳೆಗೆ ಪರಿಹಾರ ಮಾಡದಿದ್ದರೆ ಗ್ರಾಮ ಪಂಚಾಯತ್ ಕಾರ್ಯಾಲಯ ಎದುರುಗಡೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಕೆ ನೀಡಿದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ