LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತವನ್ನು ಸಂಕಷ್ಟದಿಂದ ಪಾರುಮಾಡಿದ ಗಿಲ್, ರಾಹುಲ್ ಪಾಲುಗಾರಿಕೆ

Advertisement
ಮ್ಯಾಂಚೆಸ್ಟರ್ : ಕೆ.ಎಲ್. ರಾಹುಲ್ ಹಾಗೂ ನಾಯಕ ಶುಭಮಾನ್ ಗಿಲ್ ಅವರ ಮುರಿಯದ ನಾಲ್ಕನೇ ವಿಕೆಟ್ ಗೆ ಕೂಡಿ ಹಾಕಿದ 174 ರನ್ ಪಾಲುಗಾರಿಕೆಯ ನೆರವಿನಿಂದ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸೋಲಿನ ದವಡೆಯಿಂದ ಪಾರಾಗಲು ಉತ್ತಮ ಯತ್ನ ನಡೆಸಿದೆ.

ಎಮಿರೆಟ್ಸ್ ಓಲ್ ಟ್ರೆಪಿಡ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನಾಲ್ಕನೇ ದಿನದಾಟ ಮುಗಿದಾಗ ಭಾರತ ತನ್ನ ದ್ವಿತೀಯ ಸರದಿಯಲ್ಲಿ 2 ವಿಕೆಟ್ ಗೆ 174 ರನ್ ಗಳಿಸಿದ್ದು, ಇಂಗ್ಲೆಂಡ್ ನ ಮುನ್ನಡೆಯನ್ನು ಅಳಿಸಿ ಹಾಕಲು ಉಳಿದ ಎಂಟು ವಿಕೆಟ್ ಗಳಿಂದ ಇನ್ನು 137 ರನ್ ಗಳಿಸಬೇಕಿದೆ. ಆರಂಭ ಆಟಗಾರನಾಗಿ ಆಡಲು ಬಂದ ಕೆ.ಎಲ್. ರಾಹುಲ್ 87 ಹಾಗೂ ನಾಯಕ ಶುಭಮಾನ್ ಗಿಲ್ 78 ರನ್ ಗಳಿಸಿ ಕ್ರೀಸ್ ಬಳಿ ಇದ್ದರು.

ಇದಕ್ಕೆ ಮುನ್ನ ಭಾರತದ ಮೊದಲ ಇನ್ನಿಂಗ್ಸ್  ಮೊತ್ತಕ್ಕೆ ಉತ್ತರವಾಗಿ ಆಡಿದ  ಇಂಗ್ಲೆಂಡ್ ತನ್ನ ಮೊದಲ ಸರದಿಯಲ್ಲಿ 669 ರನ್ ಗಳಿಸಿತ್ತು. ಇದರಿಂದ ಭಾರತ ತಂಡ 311 ರನ್ ಗಳ ಇನ್ನಿಂಗ್ಸ್ ಹಿನ್ನಡೆಯೊಂದಿಗೆ ತನ್ನ ದ್ವಿತೀಯ ಸರದಿ ಆರಂಭಿಸಿತು. ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ಹಾಗೂ ಸಾಯಿ ಸುದರ್ಶನ್ ವಿಕೆಟ್ ಗಳನ್ನು ಕಳೆದುಕೊಂಡ ಭಾರತ ರನ್ ಖಾತೆ ತೆರೆಯದೇ 2 ವಿಕೆಟ್ ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತು. ಇದಾದ ನಂತರ ನಾಯಕ ಶುಭಮಾನ್ ಗಿಲ್ ಹಾಗೂ ಕೆ.ಎಲ್. ರಾಹುಲ್ ಜವಾಬ್ದಾರಿ ಅರಿತು ಆಟವಾಡಿ ತಂಡವನ್ನು ಒಂದು ಹಂತಕ್ಕೆ ಸಂಕಷ್ಟದಿಂದ ಪಾರು ಮಾಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ