LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿಯನ್ನು ಬಂಧಿಸಿದ ಗೋಕಾಕ ಪೋಲಿಸರು

Advertisement

ಗೋಕಾಕ ತಾಲೂಕಿನ ಸಮೀಪದ ಬೆನಚಿಮರಡಿ  ಗ್ರಾಮದ ಹೊಲದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಬೆನಚಿಮರಡಿ ಗ್ರಾಮದ ಅವಣ್ಣಾ ಸಿದ್ದಪ್ಪ ತಪಸಿ  ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 13 ಕೆಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.
news_1787122976_0_803.webp

 

ಹೊಲದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳಗಾವಿ ಎಸ್ ಪಿ, ಕೆ.ರಾಮರಾಜನ್ ಇವರ ಆದೇಶದಂತೆ ಡಿಎಸಪಿ ರವಿ ನಾಯಕ ಇವರ ಮಾರ್ಗದರ್ಶನದಲ್ಲಿ ಸಿಪಿಆಯ್ ಶ್ರೀಶೈಲ ಬ್ಯಾಕೂಡ ಇವರು ರಚಿಸಿದ ತಂಡದೊಂದಿಗೆ ಪಿಎಸ್ ಐ ಕೆ,ಬಿ, ವಾಲಿಕರು ಇವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಡಿ,ಜಿ,ಕೊಣ್ಣೂರ,ಚಂದ್ರು ಸಣ್ಣಕ್ಕಿ ,ಮಹಾಂತೇಶ ಮನ್ನಿಕೇರಿ, ಸಿಬ್ಬಂದಿಗಳಾದ ಬಿ,ವಿ,ನೇರ್ಲಿ, ಹನಮಂತ ಮಲ್ಲಾಡದವರ,ಹಣಮಂತ ಗೌಡಿ, ನಾಗೇಶ ದುರದುಂಡಿ, ಹಾಗೂ ನಾಗಪ್ಪ ಬೆಳಗಲಿ ಅವರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ಗೋಕಾಕ ಗ್ರಾಮೀಣ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವರದಿ:ಮನೋಹರ ಮೇಗೇರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST