Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯಿತಿ ನೌಕರರಿಗೆ ಸಿಹಿಸುದ್ದಿ : ಕನಿಷ್ಠ ವೇತನ ನಿಗದಿ 

Advertisement
ಬೆಂಗಳೂರು : ರಾಜ್ಯದ ಪಂಚಾಯಿತಿ ನೌಖರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿದ್ದು, ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಕುರಿತು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿಧೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚಿಸಿಲಾಗಿದೆ ಎಂದು ತಿಳಿಸಿದ್ದಾರೆ.

ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆ ಅವಕಾಶ, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳ ನಿಗದಿ, ಮುಂತಾದ ಬೇಡಿಕೆಗಳು ಪರಿಶೀಲನೆಯ ಹಂತದಲ್ಲಿದೆ.

ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಾಗಾರರ ಹುದ್ದೆಗಳನ್ನು ಐಪಿಡಿ ಸಾಲಪ್ಪ ವರದಿಗೆ ಅನುಗುಣವಾಗಿ ಸೃಜಿಸಬೇಕೆಂಬ ನೌಕರರ ಸಂಘದ ಬೇಡಿಕೆಯ ಕುರಿತು ಸಾಲಪ್ಪನವರ ವರದಿಯು ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಗ್ರಾಮೀಣ ಪ್ರದೇಶಕ್ಕೆ ಅನ್ವಯಿಸುವಂತೆ ವರದಿಯನ್ನು ಸಿದ್ಧಪಡಿಸಲು ಉಪ ಸಮಿತಿ ರಚಿಸಲಾಗುವುದು.

ಗ್ರಾಮಪಂಚಾಯತಿಗಳ ಸಿಬ್ಬಂದಿಗಳ ಕುಂದುಕೊರತೆಗಳನ್ನು ನೀಗಿಸಲು ಮತ್ತು ಬೇಡಿಕೆಗಳನ್ನು ಪೂರೈಸಲು ನಮ್ಮ ಸರ್ಕಾರ ಸದಾ ಬದ್ದವಾಗಿರಲಿದೆ ಎಂದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ