Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಗರ್ಭಕಂಠದ ಕ್ಯಾನ್ಸರ್ ತಡೆಗೆ ಸರಕಾರ ಕ್ರಮ’

Advertisement

ಬೆಂಗಳೂರು: ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, 14 ವರ್ಷದ ಎಲ್ಲಾ ಬಾಲಕಿಯರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ.


ಆರ್ಟಿಸ್ಟ್ ಫಾರ್ ಹರ್ ಸಂಸ್ಥೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನಾ ಅಭಿಯಾನಕ್ಕೆ ಚಾಲನೆ ನೀಡಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿದರು.


ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ಪತ್ತೆಯಾಗುತ್ತಿದೆ. ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಎಚ್ಪಿವಿ ಲಸಿಕೆ ಸಹಕಾರಿ. ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಲಸಿಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಕಾರ್ಯಗತವಾಗುವ ವಿಶ್ವಾಸವಿದೆ. ನವದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯದಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿಯೂ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.


ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್ಪಿವಿ ಲಸಿಕೆ ಹಾಕುವುದರಿಂದ ಭವಿಷ್ಯದಲ್ಲಿ ಅವರಿಗೆ ಎದುರಾಗಬಹುದಾದ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಸ್ತಾವವು ಸರಕಾರದ ಮುಂದಿದ್ದು, ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.


ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗಾಗಿ ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ 90-70-90 ಸೂತ್ರಕ್ಕೆ (14 ವರ್ಷದೊಳಗಿನ ಶೇ.90ರಷ್ಟು ಹೆಣ್ಣು ಮಕ್ಕಳಿಗೆ ಲಸಿಕೆ, 25 ವರ್ಷದ ನಂತರ ಶೇ.70ರಷ್ಟು ಮಹಿಳೆಯರ ಸ್ಕ್ರೀನಿಂಗ್, ಬಾಧಿತರ ಪೈಕಿ ಶೇ.90ರಷ್ಟು ಮಹಿಳೆಯರಿಗೆ ಚಿಕಿತ್ಸೆ ಲಭ್ಯತೆ) ಅನುಗುಣವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನ ನಡೆಯಲಿದೆ. ವಿಷಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಬೇಕು ಎಂಬುದು ಸರಕಾರದ ಆಶಯವಾಗಿದೆ.


ಪ್ರಸಕ್ತ ವರ್ಷದ ಬಜೆಟ್ನಲ್ಲಿ ಕಲ್ಯಾಣ ಕರ್ನಾಟಕದ 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕುವ ಕಾರ್ಯಕ್ರಮ ಪ್ರಕಟಿಸಿ ಹಣ ತೆಗೆದಿಡಲಾಗಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ವರ್ಷದ 14 ವರ್ಷ ಪೂರೈಸುವ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಮುಂಬರುವ ದಿನಗಳಲ್ಲಿ ಲಸಿಕೆಯ ಬೆಲೆ ತಗ್ಗುವ ಸಾಧ್ಯತೆ ಇದ್ದು, ಎಲ್ಲಾ ಹೆಣ್ಣು ಮಕ್ಕಳಿಗೂ ಇದು ಲಭ್ಯವಾಗಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ