LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮರ್ಯಾದೆಗೇಡು ಹತ್ಯೆ ಸೇರಿ 11 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ 

Advertisement

ಬೆಂಗಳೂರು: ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ 11 ವಿಧೇಯಕಗಳ ಪೈಕಿ ಮರ್ಯಾದೆಗೇಡು ಹತ್ಯೆ ತಡೆಯುವ ಉದ್ದೇಶದ 'ಇವ ನಮ್ಮವ ಇವ ನಮ್ಮವ' ಮಸೂದೆ ಸೇರಿದಂತೆ 10 ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಅಧಿಕೃತ ರಾಜ್ಯ ಪತ್ರ ಪ್ರಕಟಿಸಲಾಗಿದೆ.


ಶಿಕ್ಷಕರ ವರ್ಗಾವಣೆಯ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಆದ್ಯತೆ ನೀಡುವ ಮಸೂದೆ, ಕರ್ನಾಟಕ ಪೊಲೀಸ್ ಮಸೂದೆ, ಮುನ್ಸಿಪಾಲಿಟಿ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.


ಗ್ರಾಪಂ, ತಾಪಂ, ಜಿಪಂಗಳು ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮತ ಪತ್ರ ಬಳಕೆ ಕಡ್ಡಾಯಗೊಳಿಸುವ ಕರ್ನಾಟಕ ಸರ್ಕಾರದ 2026ರ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಹೊರತುಪಡಿಸಿ ಉಳಿದ ಹತ್ತು ವಿಧೇಯಕಗಳಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.


ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ ನಿಷೇಧ ಅಂತರ್ಜಾತಿ ಹಾಗೂ ಅಂತರ್ ಧರ್ಮೀಯ ವಿವಾಹಕ್ಕೆ ಅಡ್ಡಿ, ಸಂಪ್ರದಾಯಗಳ ಹೆಸರಲ್ಲಿ ಅಪರಾಧ ತಡೆಗಟ್ಟುವ ಸಲುವಾಗಿ ಬಜೆಟ್ ಅಧಿವೇಶನದಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಇವ ನಮ್ಮವ ಇವ ನಮ್ಮವ ಮಸೂದೆಗೆ ಅಂಕಿತ ಅಂಕಿದ್ದಾರೆ.


ಈ ಮೂಲಕ ಕರ್ನಾಟಕದಲ್ಲಿ ವಿವಾಹದಲ್ಲಿ ಆಯ್ಕೆ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಲ್ಲಿ ಅಪರಾಧಗಳ ತಡೆಗಟ್ಟುವಿಕೆ ಮತ್ತು ನಿಷೇಧ ವಿಧೇಯಕ 2026 ಅಸ್ತಿತ್ವಕ್ಕೆ ಬಂದಿದೆ.


ಶಿಕ್ಷಕರ ವರ್ಗಾವಣೆ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಮಸೂದೆ, ಕರ್ನಾಟಕ ಪೊಲೀಸ್ ಮಸೂದೆ, ಕರ್ನಾಟಕ ಮುನ್ಸಿಪಾಲಿಟಿಗಳ ಮತ್ತು ಕೆಲವು ಇತರ ಕಾನೂನು ತಿದ್ದುಪಡಿ ಮಸೂದೆ, ಕರ್ನಾಟಕ ವೃತ್ತಿಗಳ, ಕಸಬುಗಳ ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಿನ ತೆರಿಗೆ ಮಸೂದೆ, ಕರ್ನಾಟಕ ಸರ್ಕಾರ ಶೈಕ್ಷಣಿಕ ಸಂಸ್ಥೆಯ ಭೂಮಿ ರಕ್ಷಣೆ ಸಕ್ರಮಾತಿ ಮಸೂದೆ, ಕರ್ನಾಟಕ ಧನ ವಿನಿಯೋಗ ಮಸೂದೆ, ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ಮಸೂದೆಗಳು ಸೇರಿವೆ ಎಂದು ಹೇಳಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ