ಕಲಬುರಗಿ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನಕ್ಕೆ ಇನ್ಮುಂದೆ ಸರ್ಕಾರದ ಅನುಮತಿ (Permission) ಪಡೆಯುವುದು ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಹತ್ವದ ಹೇಳಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವಿರುವವರೆಗೂ ಈ ನಿಯಮ ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸುವ ಮೂಲಕ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದ್ದಾರೆ.
ಆರ್ಎಸ್ಎಸ್ ಸಂಘಟನೆಯ ನೋಂದಣಿ ಹಾಗೂ ದೇಣಿಗೆ ಸಂಗ್ರಹದ ಕುರಿತು ಮತ್ತೊಮ್ಮೆ ವಾಗ್ದಾಳಿ ನಡೆಸಿದ ಸಚಿವರು, ನೂರು ವರ್ಷಗಳ ಇತಿಹಾಸವಿರುವ ಸಂಘಟನೆಯ ದಾಖಲೆ ಪತ್ರಗಳನ್ನು ಹುಡುಕುವಂತೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ತಾವು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ ತಮ್ಮ ವೈಯಕ್ತಿಕ ಜೀವನ ಹಾಗೂ ಕೌಟುಂಬಿಕ ಹಿನ್ನೆಲೆಯನ್ನು ಕೆದಕಲಾಗುತ್ತಿದೆ ಎಂದು ಆಕ್ಷೇಪಿಸಿದ ಅವರು, ಇಂತಹ ಬೆದರಿಕೆಗಳಿಗೆ ತಾವು ಹೆದರುವ ವ್ಯಕ್ತಿಯಲ್ಲ ಎಂದು ಮಾರ್ಮಿಕವಾಗಿ ನುಡಿದರು.


